ಮೆಕ್ಸಿಕೊದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್ ಬಂಧನ

Date:

  • ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ದೀಪಕ್ ಬಾಕ್ಸರ್ ದೆಹಲಿಗೆ
  • ದೀಪಕ್ ಹುಡುಕಿಕೊಟ್ಟವರಿಗೆ ₹3 ಲಕ್ಷ ಘೋಷಿಸಿದ್ದ ಪೊಲೀಸ್

ಕುಖ್ಯಾತ ಹಾಗೂ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬುಧವಾರ (ಏಪ್ರಿಲ್ 5) ದೆಹಲಿಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ಇಬ್ಬರು ಸದಸ್ಯರ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್‌ನನ್ನು ಮೆಕ್ಸಿಕೊದಲ್ಲಿ ಬಂಧಿಸಿದೆ.

ಬಳಿಕ ಆತನನ್ನು ಬುಧವಾರ ಬೆಳಿಗ್ಗೆ ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ಬೆಳಿಗ್ಗೆ 6 ಗಂಟೆ ಹೊತ್ತಿಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು ಎಂದು ಪೊಲೀಸರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರ ದೆಹಲಿಯಲ್ಲಿ ಉದ್ಯಮಿಯೊಬ್ಬರ ಹತ್ಯೆ ಆರೋಪ ಹಾಗೂ ಆತನ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆ ನಡೆಸಿದರು.

ದೀಪಕ್ ಬಾಕ್ಸರ್ ಬಂಧನಕ್ಕಾಗಿ ಎಫ್‌ಬಿಐ ಸೇರಿದಂತೆ ಮೆಕ್ಸಿಕೊದ ಪೊಲೀಸರು ನಮಗೆ ಸಹಾಯ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಸಿಪಿ) ಧಲಿವಾಲ್ ಅವರು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು.

“ದೆಹಲಿ – ಎನ್‌ಸಿಆರ್‌ ವ್ಯಾಪ್ತಿಯಲ್ಲಿ ದೀಪಕ್ ಬಾಕ್ಸರ್ ಕುಖ್ಯಾತ ಗ್ಯಾಂಗ್‌ಸ್ಟರ್ ಆಗಿ ಹೆಸರು ಮಾಡಿದ್ದಾನೆ. ಆತನಿಗಾಗಿ ದೆಹಲಿಯ ವಿಶೇಷ ತಂಡ ಹಲವು ತಿಂಗಳಿಂದ ಹುಡುಕಾಟ ನಡೆಸಿತ್ತು” ಎಂದು ಧಲಿವಾಲ್ ಮಾಹಿತಿ ನೀಡಿದರು.

ರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಜೇತನಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್‌ ಮೆಕ್ಸಿಕೊ ಮೂಲಕ ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದನು.

ಸಿಕ್ಕಿಬೀಳುವ ಮೊದಲು ಅಲ್ಲಿಂದ ದೆಹಲಿ ಮತ್ತು ನೆರೆಯ ರಾಜ್ಯಗಳಲ್ಲಿ ತನ್ನ ಸಂಘಟಿತ ಅಪರಾಧ ತಂಡವನ್ನು ಮುನ್ನಡೆಸಲು ಯೋಜಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್‌ಸ್ಟರ್‌ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು ₹3 ಲಕ್ಷ ಬಹುಮಾನ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ | ಮೊಘಲರು, ಜಾತಿ ವ್ಯವಸ್ಥೆ ಮುಂತಾದ ಐತಿಹಾಸಿಕ ಸಂಗತಿಗಳು ಕಡಿತ

2021ರಲ್ಲಿ ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್, ‘ಗೋಗಿ ಗ್ಯಾಂಗ್’ ಅನ್ನು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಕಳೆದ ಐದು ವರ್ಷಗಳಲ್ಲಿ ಕೊಲೆ ಮತ್ತು ಸುಲಿಗೆ ಸೇರಿದಂತೆ 10 ಪ್ರಮುಖ ಗಂಭೀರ ಪ್ರಕರಣಗಳಲ್ಲಿ ಗ್ಯಾಂಗ್‌ಸ್ಟರ್‌ ದೀಪಕ್‌ ಬಾಕ್ಸರ್‌ ಭಾರತಕ್ಕೆ ಬೇಕಾಗಿದ್ದಾನೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಈ ದಿನ ವಿಶೇಷ | ಬಿಜೆಪಿ ಬೆಳೆಸಿದ ಯಡಿಯೂರಪ್ಪ ಬಿಜೆಪಿಗೇ ಬೇಡವಾದರೆ?

ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು,...

ಕೇಂದ್ರದ ದ್ರೋಹ ಸಮರ್ಥಿಸಿದ ಪ್ರಲ್ಹಾದ್‌ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿದ್ದರಾಮಯ್ಯ ಕರೆ

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಲ್ಹಾದ್‌...

ʼಈ ದಿನʼ ಸಮೀಕ್ಷೆ | ಮೋದಿಗಿಂತಲೂ ಸಿದ್ದರಾಮಯ್ಯ ರಾಜ್ಯದ ಜನರಿಗೆ ಹೆಚ್ಚು ಇಷ್ಟ!

ರಾಜಕಾರಣದಲ್ಲಿ ಸದಾ ದ್ವೇಷದ ಕುದುರೆಯೇರಿ ದಿಬ್ಬಣ ಹೊರಡುವ ಮದುಮಗನಂತೆ ಕಾಣುವ ಪ್ರಧಾನಿ...