ರೈಲು ದುರಂತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Date:

ರೈಲು ದುರಂತಕ್ಕೆ 288 ಮಂದಿ ಪ್ರಯಾಣಿಕರು ಬಲಿ

ತಲಾ 10 ಲಕ್ಷ ಪರಿಹಾರ ಘೋಷಿಸಿರುವ ರೈಲ್ವೆ ಸಚಿವಾಲಯ

ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಭೀಕರ ಅಪಘಾತದಲ್ಲಿ 288 ಮಂದಿ ಪ್ರಯಾಣಿಕರು ಮೃತ ಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಒಡಿಶಾ ಸರ್ಕಾರ ಪರಿಹಾರ ಘೋಷಿಸಿದೆ.

ಭಾನುವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ಪ್ರತಿ ವ್ಯಕ್ತಿಗಳ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಿದ್ದು, ತೀವ್ರವಾಗಿ ಗಾಯಗೊಂಡಿರುವವರಿಗೆ ತಲಾ ಒಂದು ಲಕ್ಷ ಪರಿಹಾರ ನೀಡುವುದಾಗಿ” ತಿಳಿಸಿದ್ದಾರೆ.

ರೈಲ್ವೆ ಸಚಿವಾಲಯ ಕೂಡ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಪ್ರತಿ ವ್ಯಕ್ತಿಗೆ 2 ಲಕ್ಷ ಮತ್ತು ಸಣ್ಣ ಪುಟ್ಟ ಗಾಯ ಆಗಿರುವವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿತ್ತು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಅಪಘಾತದಲ್ಲಿ ಮೃತಪಟ್ಟ ತಮ್ಮ ರಾಜ್ಯದ ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಭಾನುವಾರ ರೈಲು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಅವರು ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು. ತೀವ್ರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ಮತ್ತು ಸಣ್ಣ ಪುಟ್ಟ ಗಾಯ ಆಗಿರುವವರಿಗೆ ತಲಾ 50 ಸಾವಿರ ನೀಡುವುದಾಗಿ ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...