ನವದೆಹಲಿ | ಅಂಗವಿಕಲ ಮುಸ್ಲಿಂ ವ್ಯಕ್ತಿಗೆ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದಕ್ಕೆ ಹಲ್ಲೆ; ಸಾವು

Date:

Advertisements

ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿ ಮಂಗಳವಾರ(ಸೆ.26 ರಂದು) ನಡೆದಿದೆ. ಅಂಗವಿಕಲ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ.

ಮೃತಪಟ್ಟಿರುವ 26 ವರ್ಷದ ಅಂಗವಿಕಲ ವ್ಯಕ್ತಿ ಮೊಹಮ್ಮದ್ ಇಸಾರ್ ಎಂಬಾತ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಎನ್ನುವ ಕಾರಣಕ್ಕೆ ಕೆಲವರು ಇಸಾರನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಹಲ್ಲೆಗೊಳಗಾದ ಪರಿಣಾಮ ಕೆಲ ಸಮಯದ ಬಳಿಕ ಇಸಾರ್ ಮೃತಪಟ್ಟಿದ್ದಾನೆ.

ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಗುಂಪೊಂದು ವ್ಯಕ್ತಿಯನ್ನು ಕೋಲುಗಳಿಂದ ಹಲ್ಲೆ ಮಾಡುವುದು ವಿಡಿಯೋದಲ್ಲಿ ಕಂಡುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಣಿಪುರ ಹೆಚ್ಚಾದ ಹಿಂಸಾಚಾರ: ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ವೆಂದು ಘೋಷಿಸಿದ ಸರ್ಕಾರ

ದೃಶ್ಯವನ್ನು ಪೊಲೀಸರು ಪರಿಶೀಲಿಸಿದ್ದು, ಸದ್ಯ ಅಹಿತಕರ ಘಟನೆ ನಡೆಯದಂತೆ ಘಟನಾ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಮತ್ತೊಂದು ಸಮುದಾಯದ ಹುಡುಗನೊಬ್ಬನ ಹತ್ಯೆ ಆಗಿತ್ತು. ನಂತರ ಈ ಪ್ರದೇಶದಲ್ಲಿಉದ್ವಿಗ್ನತೆ ಉಂಟಾಗಿತ್ತು.

ಆದರೆ ಕೋಮುವಾದಿ ಗಲಭೆಯನ್ನು ನಿರಾಕರಿಸಿದ ಪೊಲೀಸರು, ಇಸಾರ್‌ ಮೇಲೆ ದಾಳಿ ಮಾಡಿದ ವ್ಯಕ್ತಿಗಳು ಎರಡೂ ಸಮುದಾಯಗಳಿಗೆ ಸೇರಿದವರು ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಪ್ರಕರಣ ದಾಖಲಾಗಿದ್ದು, ಕೆಲ ಆರೋಪಿಗಳನ್ನು ಗುರುತಿಸಲಾಗಿದ್ದು, ಇತರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಶೀಘ್ರದಲ್ಲೇ ಅವರನ್ನು ಕೂಡ ಬಂಧಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. ಹಿಂದೆಲ್ಲಾ ಹೆಚ್ಚಾಗಿ ಎರಡು ಪಕ್ಷಗಳ ಮಧ್ಯೆ ಘರ್ಷಣೆ – ಸಾವು – ನೋವು ಸಂಭವಿಸುತ್ತಿತ್ತು.
    ಇಂದು , ಎರಡು ಕೋಮುಗಳ ಮಧ್ಯೆ ಈ ರೀತಿಯ ಘಟನೆ ನಡೆಯುತ್ತಿದೆ. ಇದಕ್ಕೆಂದು ಕೊನೆ?
    ವಿಶ್ವಗುರು ಎಂದು ಬೀಗುವ ನಮ್ಮಲ್ಲಿ ಮಾನವೀಯತೆ ಎಂಬುದು ಸ್ವಲ್ಪವಾದರೂ ಇರಬೇಕಲ್ಲವೇ…?

    • ಕೋಮುವಾದದ ಅಫೀಮು ನೆತ್ತಿಗೇರಿದಾಗ ಮಾನವತೆ ಮನುಷ್ಯತ್ವ ಕರುಣೆ ಮಾಯ ವಾಗುತ್ತಿವೆ.

  2. It’s because of backing from the government of india which supports killers who were taught and trained by RSS and their brother organisations like sriram sene, bajrangdal vHP etc

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X