ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

Date:

Advertisements
  • ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನದ ಗಡಿ ಪೂಂಛ್ ಬಳಿ ಸೇನಾ ಕಾರ್ಯಾಚರಣೆ
  • ಸೇನಾ ಗುಂಡಿನ ದಾಳಿಯಲ್ಲಿ ಒಬ್ಬ ಶಂಕಿತ ಉಗ್ರ ಮೃತ, ಉಳಿದವರು ಪರಾರಿ

ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಮೂವರು ಶಂಕಿತ ಪಾಕಿಸ್ತಾನ ಒಳ ನುಸುಳುಕೋರ ಪೈಕಿ ಒಬ್ಬನನ್ನು ಸೇನಾಪಡೆ ಗುಂಡಿಕ್ಕಿ ಹತ್ಯೆಗೈದಿದೆ.

ಭಾನುವಾರ (ಏಪ್ರಿಲ್ 9) ಜಮ್ಮು-ಕಾಶ್ಮೀರದಲ್ಲಿ ಸೇನೆ ಶಂಕಿತ ಭಯೋತ್ಪಾದಕರ ಒಳ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಿದೆ. ಎಲ್ಒಸಿ ಬಳಿಯ ಶಾಹಪುರ ಸೆಕ್ಟರ್ ಬಳಿ ಒಳನುಸುಳುವಿಕೆ ಪ್ರಯತ್ನ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶನಿವಾರ ರಾತ್ರಿ 2.15 ವೇಳೆಯಲ್ಲಿ ಮೂವರು ಶಂಕಿತ ಭಯೋತ್ಪಾದಕರು ಜಮ್ಮು-ಕಾಶ್ಮೀರ ಗಡಿಯಲ್ಲಿ ಒಳ ನುಸುಳಲು ಪ್ರಯತ್ನ ಮಾಡಿದ್ದರು. ಈ ಪ್ರಯತ್ನವನ್ನು ಸೇನಾಪಡೆ ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

“ಪೂಂಛ್ ಜಿಲ್ಲೆಯ ಭಾರತ- ಪಾಕಿಸ್ತಾನ ಗಡಿಯ ಬಳಿ ಏಪ್ರಿಲ್ 8 ಮತ್ತು 9ರಂದು ಅನುಮಾನಸ್ಪದ ಚಲನವಲಗಳು ಕಂಡುಬಂದಿದ್ದವು. ಶನಿವಾರ ತಡರಾತ್ರಿ ಶಂಕಿತ ಭಯೋತ್ಪಾದಕರು ಒಳನುಸುಳುವ ಪ್ರಯತ್ನ ಮಾಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ” ಎಂದು ಸೇನಾ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಜಮ್ಮುವಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೆಟ್ಟ ಬಟ್ಟೆ ಧರಿಸುವ ಹುಡುಗಿಯರು ಶೂರ್ಪನಖಿಯಂತೆ ಕಾಣುತ್ತಾರೆ : ಬಿಜೆಪಿ ನಾಯಕ ಕೈಲಾಶ್

“ಸೇನಾಪಡೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಒಬ್ಬ ನುಸುಳುಕೋರ ಗುಂಡಿಗೆ ಬಲಿಯಾಗಿರುವುದು ತಿಳಿದಿದೆ. ಉಳಿದ ಶಂಕಿತ ಭಯೋತ್ಪಾದಕರು ಅರಣ್ಯದೊಳಗೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ” ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮಿರ ಗಡಿಯಲ್ಲಿ ಶಂಕಿತ ಪಾಕಿಸ್ತಾನ ಭಯೋತ್ಪಾದಕರ ಬಗ್ಗೆ ಸೇನಾಪಡೆ ನಿಗಾವಹಿಸಿದ್ದು ಗಡಿಯಲ್ಲಿ ಗಸ್ತು ತಿರುಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X