ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

Date:

Advertisements

ತಿಂಗಳು ಕಳೆದರೂ ತಣ್ಣಗಾಗದ ಮಣಿಪುರ ಹಿಂಸಾಚಾರ

ನಿರಂತರ ಹಿಂಸಾಚಾರಕ್ಕೆ ನೂರಕ್ಕೂ ಹೆಚ್ಚು ಮಂದಿ ಬಲಿ

ಈಶಾನ್ಯ ರಾಜ್ಯ ಮಣಿಪುರದಲ್ಲಿ ತಿಂಗಳು ಕಳೆದರೂ ಹಿಂಸಾಚಾರ ಮಾತ್ರ ನಿಲ್ಲುತ್ತಿಲ್ಲ. ಕೇಂದ್ರ ಸರ್ಕಾರ ಈ ಹಿಂಸಾಚಾರವನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿರುವಾಗಲೇ ಬಹುಭಾಷಾ ನಟ ಕಿಶೋರ್‌ ಕುಮಾರ್‌, ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಮಣಿಪುರ ಹಿಂಸಾಚಾರದ ಕುರಿತ ಮಾಧ್ಯಮ ವರದಿಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಪ್ರತಿಕ್ರಿಯಿಸಿರುವ ಕಿಶೋರ್‌, “ಒಂದು ಕರೆಯಲ್ಲಿ ಉಕ್ರೇನ್ ಯುದ್ಧ ನಿಲ್ಲಿಸಿದೆವೆಂದು ಬಡಾಯಿ ಕೊಚ್ಚುವ ಜನ ಮಣಿಪುರವನ್ನು ತಿಂಗಳಿಂದ ಹೊತ್ತಿ ಉರಿಯಲು ಬಿಟ್ಟಿದ್ದೇಕೆ? ಲಾಭ.. ಲಾಭ.. ಲಾಭ.. ಎಲ್ಲದರಲ್ಲೂ ಲಾಭ… ಪಾಪದ ಜನರ ಸಾವಿನಲ್ಲೂ ಲಾಭದ ಧಂದೆ ಮಾಡುವ ವ್ಯಾಪಾರಿಯ ಕೈಗೆ ದೇಶ ಕೊಟ್ಟಂತಾಯ್ತು. ಜನ ಸಾಯುತ್ತಲೇ ಇರಲಿ, ಗುಜರಾತಿನಲ್ಲೊ, ಪುಲ್ವಾಮದಲ್ಲೊ, ಒಡಿಶಾದಲ್ಲೊ, ಮಣಿಪುರದಲ್ಲೊ… ದೇಶದ ಮೂಲೆ ಮೂಲೆಯಲ್ಲಿ ಹಿಂಸೆಯ ರೋಗವನ್ನು ಹರಡಿ ಲಾಭ ಹೆಕ್ಕುತ್ತಲೇ ಇರುತ್ತಾರೆ ದ್ವೇಷದ ವ್ಯಾಪಾರಿಗಳು. ಯಾರೂ ಪ್ರಶ್ನಿಸಬೇಡಿ, ಪತ್ರಿಕೆಯಾದರೂ ಸರಿ ಟ್ವಿಟರ್‌ನಲ್ಲಾದರೂ ಸರಿ. ತುಮ್ ಬಸ್ ಚುಪ್ ರಹೋ ಯೇ ಉನ್ ಕೀ ಮನ್ ಕೀ ಬಾತ್ ಹೈ (ನೀವೆಲ್ಲರೂ ಸುಮ್ಮನಿರಿ ಇದು ಅವರ ಮನದ ಮಾತು)” ಎಂದು ವ್ಯಂಗ್ಯವಾಡಿದ್ದಾರೆ.

ಪರಿಶಿಷ್ಟ ಪಂಗಡಗಳ ಸ್ಥಾನಮಾನಕ್ಕೆ ಆಗ್ರಹಿಸಿ ರಾಜ್ಯದ 10 ಜಿಲ್ಲೆಗಳಲ್ಲಿ ಶುರುವಾಗಿದ್ದ ಪ್ರತಿಭಟನೆ ಜನಾಂಗೀಯ ಹಿಂಸೆಗೆ ತಿರುಗಿ ತಿಂಗಳು ಕಳೆದಿದೆ. ಈವರೆಗೆ ನೂರಕ್ಕೂ ಹೆಚ್ಚು ಜನರು ಈ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದು, 50 ಸಾವಿರಕ್ಕೂ ಅಧಿಕ ಮಂದಿ ತಮ್ಮ ಶಾಶ್ವತ ನೆಲೆಗಳನ್ನು ಕಳೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

ಉದ್ರಿಕ್ತರ ಗುಂಪೊಂದು ಗುರುವಾರ ಸಂಜೆ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಆರ್‌.ಕೆ ರಂಜನ್‌ ಸಿಂಗ್‌ ಅವರ ಮನೆ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆಸಿದ್ದು, ಇಡೀ ಮನೆಯನ್ನು ಸುಟ್ಟು ಹಾಕಿದ್ದಾರೆ. ಜೂನ್‌ 15ರಂದು ಮಣಿಪುರದ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರ ಅಧಿಕೃತ ನಿವಾಸಕ್ಕೂ ಅಪರಿಚಿತರು ಬೆಂಕಿ ಹಚ್ಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸ್ವಾಮಿ ನಮ್ಮ‌ ದೇಶದಲ್ಲಿ ಎಡಪಂಥೀಯರು ದೇಶದ್ರೋಹಿಗಳ‌ ಜೊತೆ ಶಾಮೀಲಾಗಿ, ದೇಶದ ಶತ್ರುಗಳ‌ ಜೊತೆ ಸೇರಿ ಎಲ್ಲ‌ ತರಹದ ಗಲಬೆಗಳನ್ನು ಮಾಡಿಸುತ್ತಿರುತ್ತಾರೆ. ಅವರಿಗೆ ದೇಶ ಹಾಳಾದರೂ ಸರಿ‌ ಅವರು ಆಡಳಿತದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುತ್ತಾರೆ.‌ ದೇಶದ ಹೊರ ಶತ್ರುಗಳನ್ನು ಹೇಗಾದರೂ ಸದೆ ಬಡಿಯಬಹುದು ದೇಶದ ಪ್ರಜೆಗಳೇ ಹೊರ ದೇಶದವರ ಜೊತೆ ಶಾಮೀಲಾದರೆ ಹೇಗೆ ಅಷ್ಟು ಸುಲಬವಾಗಿ ಬಗ್ಗು ಬಡಿಯತ್ತೀರಿ. ಭಗವಂತನೇ ಪ್ರಕೃಯ ವಿಕೋಪಗಳಿಂದ ಮುಂತಾದ ವಿದಾನಗಳಿಂದ ಇಂತಹ ಅಧರ್ಮಿಗಳನ್ನು ಸದೆ ಬಡಿಯುತ್ತಾನೆ. ಕಾದು ನೋಡಿ, ಸಮಯವೇ ಪಾಠ ಕಲಿಸುತ್ತದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X