ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

Date:

Advertisements
  • ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ
  • ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ

ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್’ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಫೋಟೋಗಳು ಮತ್ತು ಸುದ್ದಿ ವೈರಲ್ ಆಗಿ, ಅಂತರ್ಜಾಲದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಸ್ಥಳಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ಕುಸ್ತಿಪಟುಗಳು ಈಗ ಪೊಲೀಸರ ಬಂಧಿಯಾಗಿದ್ದಾರೆ. ವಿನೇಶ್ ಪೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬೃಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಬೃಜ್‌ಭೂಷಣ್ ಮೇಲೆ ಕ್ರಮ ಕೈಗೊಂಡಿಲ್ಲ.

Advertisements

‘ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ದೃಷ್ಟಿ’ ಎಂದು ಹೇಳಿಕೊಂಡು ಪೊಲೀಸರು ಕುಸ್ತಿಪಟುಗಳ ಪ್ರತಿಭಟನೆ ನಡೆಸುತ್ತಿರುವ ಜಂತರ್ ಮಂತರ್‌ಗೆ ತೆರಳಿದ್ದಾರೆ. ಈ ವೇಳೆ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ವಿನೇಶ್ ಫೋಗಟ್ ಅವರು, “ಪ್ರಜಾಪ್ರಭುತ್ವವನ್ನು ಬಹಿರಂಗವಾಗಿಯೇ ಹತ್ಯೆ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆಯಾಗುತ್ತಿರುವ ಸಂದರ್ಭದಲ್ಲಿ ತಮ್ಮ ಹಕ್ಕಿಗಾಗಿ ಒತ್ತಾಯಿಸುತ್ತಿರುವ ಮಹಿಳೆಯರನ್ನು ಹತ್ತಿಕ್ಕಲಾಯಿತು ಎಂಬುದನ್ನು ದೇಶ ನೆನಪಿಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

“ನೂತನ ಸಂಸತ್ ಭವನಕ್ಕೆ ಕುಸ್ತಿಪಟುಗಳು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೂ ಮುನ್ನ ದೆಹಲಿಯ ಗಡಿ ಪ್ರದೇಶಗಳಾದ ಸಿಂಘು, ಟಿಕ್ಕಿ ಹಾಗೂ ಘಾಝಿಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಖಾಪ್ ಪಂಚಾಯತ್‌ನಲ್ಲಿ ಪಾಲ್ಗೊಳ್ಳದಂತೆ ತಡೆಯಬೇಕು ಎಂದು ತಮಗೆ ಸೂಚಿಸಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಈವರೆಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ನೂತನ ಸಂಸತ್ ಭವನದ ಉದ್ಘಾಟನೆ ಇರುವುದರಿಂದ ದೆಹಲಿ ತೊರೆಯುವಂತೆ ರೈತರಿಗೆ ಕೇಳಿಕೊಳ್ಳುತ್ತೇವೆ. ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ತಿಳಿಸಿದರು.

ಈ ನಡುವೆ, ಭಾರತ್ ಕಿಸಾನ್ ಯೂನಿಯನ್ ಮುಖ್ಯಸ್ಥ ಗುರುನಾಮ್ ಸಿಂಗ್ ಸೇರಿದಂತೆ ಹಲವು ರೈತರನ್ನು ಅವರ ನಿವಾಸಗಳಿಂದ ಹರಿಯಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ರೈತರು ಪ್ರತಿಭಟನಾನಿರತ ಕುಸ್ತಿಪಟುಗಳ ಪರವಾಗಿ ದೆಹಲಿಗೆ ಮೆರವಣಿಗೆ ನಡೆಸಲು ಯೋಜಿಸಿದ್ದರು.

ದೆಹಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಿಸುವ ನೆಪದಲ್ಲಿ ಪ್ರತಿಭಟನಾಕಾರರು ಬಂಧಿಸಲು ಹೊರ ದಿಲ್ಲಿಯ ಬವಾನಾದ ಎಂಸಿಡಿ ಶಾಲೆಯಲ್ಲಿ ತಾತ್ಕಾಲಿಕ ಕಾರಾಗೃಹ ನಿರ್ಮಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

ಹೊಸ ಸಂಸತ್ ಭವನದ ಉದ್ಘಾಟನೆ ಮತ್ತು ಕುಸ್ತಿಪಟುಗಳಿಂದ ಯೋಜಿತ ‘ಮಹಿಳಾ ಮಹಾಪಂಚಾಯತ್’ (ಮಹಿಳಾ ಮಹಾಸಭೆ) ಗಾಗಿ ಭದ್ರತಾ ಕ್ರಮಗಳ ಭಾಗವಾಗಿ ಕೇಂದ್ರ ದೆಹಲಿಯಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X