ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

Date:

Advertisements
  • ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಂಜಯ್‌ ರಾವುತ್‌ ಉತ್ತರ
  • ಮೋದಿ ಪದವಿ ಪ್ರಶ್ನಿಸಿದ ಕೇಜ್ರಿವಾಲ್‌ಗೆ ₹25 ಸಾವಿರ ದಂಡ

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಬಹಿರಂಗವಾಗಿ ಪ್ರದರ್ಶಿಸಬೇಕು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌ ಆಗ್ರಹಿಸಿದ್ದಾರೆ.

ನೂತನವಾಗಿ ನಿರ್ಮಾಣಗೊಂಡಿರುವ ಸಂಸತ್ತಿನ ಮುಖ್ಯದ್ವಾರದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಶೈಕ್ಷಣಿಕ ಅರ್ಹತೆಯ ದಾಖಲೆಗಳನ್ನು ತೋರ್ಪಡಿಸಬೇಕು. ಪ್ರಧಾನಿ ಮೋದಿ ಅವರ ಪದವಿಯ ಬಗೆಗಿನ ದಾಖಲೆಗಳನ್ನು ಗೋಪ್ಯವಾಗಿರಿಸುವುದರ ಅಗತ್ಯವೇನು ಎಂದು ಸಂಸದರಾಗಿರುವ ರಾವುತ್‌ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾವುತ್‌, ಪದವಿ ವಿಚಾರ ಗೋಪ್ಯವಾಗಿರಿಸಿರುವುದು ಜನತೆಯ ಅನುಮಾನಕ್ಕೆ ಕಾರಣವಾಗಿದೆ. ದೇಶದ ಕಾನೂನು ರೂಪಿಸುವವರು ಹಾಗೂ ಜನತೆಗೆ ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿಚಾರದ ಅರಿವಾಗಲಿ ಎಂದು ಸಂಜಯ್‌ ರಾವುತ್ ಹೇಳಿದರು.

Advertisements

ಗುಜರಾತ್ ವಿಶ್ವವಿದ್ಯಾಲಯದಿಂದ ಪ್ರಧಾನಿ ಮೋದಿ ಅವರ ಶೈಕ್ಷಣಿಕ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ ಮೂರು ದಿನಗಳ ನಂತರ ರಾವುತ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ಶೈಕ್ಷಣಿಕ ಮಾಹಿತಿ ಕೋರಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ ₹25 ಸಾವಿರ ದಂಡ ವಿಧಿಸಿತ್ತು. ಈ ಬಗ್ಗೆಯೂ ಸಂಜಯ್ ರಾವುತ್ ಮಾತನಾಡಿದ್ದಾರೆ.

“ಪ್ರಧಾನಿ ಮೋದಿ ಪದವಿ ವಿವರ ಕೇಳಿದರೆ, ಅದರಲ್ಲಿ ಬಚ್ಚಿಡಲು ಏನಿದೆ? ಮೋದಿಯವರು ಸ್ವತಃ ಮುಂದೆ ಬಂದು, ತಮ್ಮ ಶೈಕ್ಷಣಿಕ ಪದವಿಯ ಬಗ್ಗೆ ಸ್ಪಷ್ಟನೆ ನೀಡಬೇಕು” ಎಂದು ಸಂಜಯ್ ರಾವುತ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

“ಪ್ರಧಾನಿ ಮೋದಿ ಅವರ ಪದವಿ ದಾಖಲೆಗಳು ನಕಲಿ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಸಂಪೂರ್ಣ ರಾಜಕೀಯ ಶಾಸ್ತ್ರದಲ್ಲಿನ ಅವರ ಪದವಿಯು ಐತಿಹಾಸಿಕ ಮತ್ತು ಕ್ರಾಂತಿಕಾರಕವಾದದ್ದು. ಆದ್ದರಿಂದ ಆ ದಾಖಲೆಗಳನ್ನು ನಮ್ಮ ನೂತನ ಸಂಸತ್ತಿನ ಭವ್ಯ ಪ್ರವೇಶ ದ್ವಾರದಲ್ಲಿ ಪ್ರದರ್ಶನ ಮಾಡಬೇಕು” ಎಂದು ರಾವುತ್ ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X