ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

Date:

  • ನಸ್ರುದ್ದೀನ್‌ ನಿವಾಸದಲ್ಲಿ ಗೋಮಾಂಸ ಪತ್ತೆ ಆರೋಪ
  • ಗ್ರಾಮಸ್ಥರ ಕೈಗೆ ಸಿಲುಕಿಕೊಂಡ ನಸ್ರುದ್ದೀನ್‌ ಪುತ್ರನ ರಕ್ಷಣೆ

ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಿಷೇಧಿತ ಗೋಮಾಂಸ ಹೊಂದಿದ್ದ ಆರೋಪದಲ್ಲಿ ಗುಂಪು ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ.

- Advertisement -

ಘಟನೆಯಲ್ಲಿ ಮೂವರು ಪೊಲೀಸರು ಸೇರಿ ಆರು ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂತ್ರಸ್ತ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಉದ್ರಿಕ್ತರು ಪೊಲೀಸರ ವಾಹನಗಳನ್ನು ಧ್ವಂಸಗೊಳಿಸಿದರು. ಅಲ್ಲದೆ ಸಂತ್ರಸ್ತ ಯುವಕನ ನಿವಾಸದ ಮುಂದಿನ ಕೆಲವು ಸರಕುಗಳಿಗೆ ಬೆಂಕಿ ಹಚ್ಚಿದರು.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದನಗಳ ಹತ್ಯೆ ಮತ್ತು ಮಾರಾಟ ಜಾರ್ಖಂಡ್‌ನಲ್ಲಿ ನಿಷೇಧಿಸಲಾಗಿದೆ.

ರಾಜಧಾನಿ ರಾಂಚಿಯಿಂದ 190 ಕಿಮೀ ದೂರದ ನಿರ್ಸಾ ಪೊಲೀಸ್‌ ಠಾಣಾ ವ್ಯಪ್ತಿಯ ಭುರ್ಕುಂಡ ಪ್ರದೇಶದಲ್ಲಿ ಘಟನೆ ನಡೆದಿದೆ.

ನಸ್ರುದ್ದೀನ್ ಅನ್ಸಾರಿ ಎಂಬ ಯುವಕನ ನಿವಾಸದಲ್ಲಿ ಕೆಲವು ಗ್ರಾಮಸ್ಥರಿಗೆ ಸತ್ತ ದನ ಮತ್ತು ಗೋಮಾಂಸ ದೊರೆತಿದೆ ಎಂಬ ವಿಷಯ ಗ್ರಾಮದಲ್ಲಿ ಹರಡಿದೆ. ಕೂಡಲೇ ಉದ್ರಿಕ್ತರ ಗುಂಪು ಯುವಕನ ನಿವಾಸದ ಮುಂದೆ ಜಮಾಯಿಸಿ ಕಲ್ಲು ತೂರಾಟ ನಡೆಸಿದರು. ಉದ್ರಿಕ್ತರು ನಿವಾಸದ ಮುಂದಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದರು. ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

ಪರಿಸ್ಥಿತಿ ಈಗ ಹತೋಟಿಯಲ್ಲಿದೆ. ಸ್ಥಳದಲ್ಲಿ ಪೊಲೀಸರು ನಿಗಾ ಇರಿದ್ದಾರೆ ಎಂದು ನಿರ್ಸಾ ಉಪ ವಿಭಾಗದ ಪೊಲೀಸ್‌ ಅಧಿಕಾರಿ ಪೀತಾಂಬರ್‌ ಸಿಂಗ್‌ ಖೇರ್ವಾರ್‌ ತಿಳಿಸಿದರು.

ನಸ್ರುದ್ದೀನ್‌ ಅನ್ಸಾರಿ ಮತ್ತು ಆತನ ಕುಟುಂಬ ಅಲ್ಲಿಂದ ಪರಾರಿಯಾಗಿದೆ. ಆದರೆ, ಉದ್ರಿಕ್ತ ಗುಂಪಿನ ಕೈಗೆ ಸಿಲುಕಿಕೊಂಡಿದ್ದ ನಸ್ರುದ್ದೀನ್‌ ಪುತ್ರ ಸಹಾಬುದ್ದೀನ್‌ನನ್ನು ಗುಂಪು ಮರಕ್ಕೆ ಕಟ್ಟಿ ಹಾಕಿತು.

ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ರೀಷ್ಮಾ ರಮೇಶನ್‌ ಸ್ಥಳಕ್ಕೆ ಅಗಮಿಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿತು. ಗೋಮಾಂಸ ಇಟ್ಟ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ದಿಗ್ವಿಜಯ ಸಿಂಗ್ ಟ್ವೀಟ್ ವಿರುದ್ಧ ಬಿಜೆಪಿ ಟೀಕೆ

ನಿರ್ಸಾ ಶಾಸಕಿ ಅಪರ್ಣಾ ಸೇನ್‌ ಗುಪ್ತಾ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಶಾಸಕಿ ಅಪರ್ಣಾ, ಆಡಳಿತದ ಅಧಿಕಾರಿಗಳು ಮತ್ತು ಪೊಲೀಸರು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು.

ಗೋಮಾಂಸ ಪತ್ತೆ ಪ್ರಕರಣದಲ್ಲಿ ಸೂಕ್ತ ಕ್ರಮ ಹಾಗೂ ಗ್ರಾಮದಲ್ಲಿ ಶಾಂತಿ ನೆಲೆಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...