ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

Date:

  • ಭೂ ವಿಜ್ಞಾನ ಸಚಿವರಾಗಿ ಕಿರಣ್‌ ರಿಜಿಜು ಪ್ರಮಾಣ ವಚನ
  • ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ನೇಮಕ

ಕಿರಣ್‌ ರಿಜಿಜು ಅವರು ತಮ್ಮ ಕಾನೂನು ಖಾತೆ ಬದಲಾವಣೆ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಖಾತೆ ಬದಲಾವಣೆ ಮಾಡಿರುವುದು ಶಿಕ್ಷೆಯಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಭಾಗವಾಗಿದೆ” ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಹೇಳಿದ್ದಾರೆ.

ಸಂಪುಟದಲ್ಲಿ ಮಾಡಿದ ಪ್ರಮುಖ ಬದಲಾವಣೆ ಸಮಯದಲ್ಲಿ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಬದಲಾಯಿಸಲ್ಪಟ್ಟ ಒಂದು ದಿನದ ನಂತರ ಕಿರಣ್‌ ರಿಜಿಜು ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ಪೃಥ್ವಿ ಭವನದಲ್ಲಿ ಶುಕ್ರವಾರ (ಮೇ 19) ಬೆಳಗ್ಗೆ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಖಾತೆಯ ಬದಲಾವಣೆ ಸರ್ಕಾರದ ಕಾರ್ಯವಿಧಾನ ವಾಡಿಕೆಯ ಪ್ರಕ್ರಿಯೆಯಾಗಿದೆ ಎಂದು ರಿಜಿಜು ಉಲ್ಲೇಖಿಸಿದರು.

“ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಒಂದು ಭಾಗವೇ ಹೊರತು ನನಗೆ ನೀಡಿರುವ ಶಿಕ್ಷೆಯಲ್ಲ” ಎಂದು ಕಿರಣ್‌ ರಿಜಿಜು ಅವರು ಸ್ಪಷ್ಟಪಡಿಸಿದರು.

“ಖಾತೆ ಬದಲಾವಣೆಯು ವಾಡಿಕೆಯ ಪ್ರಕ್ರಿಯೆಯಾಗಿದೆ. ಯಾರಾದರೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ. ಪ್ರತಿಪಕ್ಷಗಳು ನನ್ನ ವಿರುದ್ಧ ಮಾತನಾಡುತ್ತವೆ. ನನಗೆ ಇದು ಹೊಸತಲ್ಲ” ಎಂದು ರಿಜಿಜು ಸುದ್ದಿಗಾರರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

ನೂತನ ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಲಾಯಿತು. ಕಿರಣ್‌ ರಿಜಿಜು ಅವರನ್ನು ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮುಂಚಿತವಾಗಿ ಗುರುವಾರ ನಡೆದ ಹಠಾತ್ ಸಂಪುಟ ಬದಲಾವಣೆಯಲ್ಲಿ ಬದಲಾಯಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...