ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

Date:

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಬುಧವಾರ ನಿಧನರಾಗಿದ್ದಾರೆ.

1971ರಲ್ಲಿ ದೂರದರ್ಶನಕ್ಕೆ ಸೇರಿದ್ದ ಅಯ್ಯರ್, ಮೂರು ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದಿದ್ದರು.

ಅತ್ಯುತ್ತಮ ಮಹಿಳಾ ಸಾಧಕರಿಗೆ ನೀಡಲಾಗುವ ʻಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿʼಯನ್ನು1989 ರಲ್ಲಿ ಪಡೆದಿದ್ದ ಗೀತಾಂಜಲಿ ಅಯ್ಯರ್, ವರ್ಲ್ಡ್ ವೈಡ್ ಫಂಡ್‌ನ ಭಾರತದ ಪ್ರಮುಖ ದಾನಿಗಳ ಮುಖ್ಯಸ್ಥರಾಗಿದ್ದರು.

ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಇಂಗ್ಲಿಷ್‌ನಲ್ಲಿ ಪದವಿ ಪೂರ್ತಿಗೊಳಿಸಿದ್ದ ಅಯ್ಯರ್‌, ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಪಡೆದಿದ್ದರು.ದೂರದರ್ಶನದಲ್ಲಿ ಸುದ್ದಿ ನಿರೂಪಕಿಯಾಗಿ ಯಶಸ್ವಿ ವೃತ್ತಿಜೀವನದ ನಂತರ, ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರಗಳಲ್ಲೂ ಸೈ ಎನಿಸಿಕೊಂಡಿದ್ದರು.  ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ನಲ್ಲಿ ಸಲಹೆಗಾರರಾಗಿದ್ದ ಗೀತಾಂಜಲಿ ಅಯ್ಯರ್‌, “ಖಂಡಾನ್” ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಂದ್ರಯಾನ 3: ವಿಕ್ರಮ್, ಪ್ರಗ್ಯಾನ್‌ನಿಂದ ಇನ್ನೂ ಯಾವುದೇ ಸಿಗ್ನಲ್ ಬಂದಿಲ್ಲ ಎಂದ ಇಸ್ರೋ

ಚಂದ್ರನ ದಕ್ಷಿಣ ಧ್ರುವದಲ್ಲಿ ನಿಂತಿರುವ ಚಂದ್ರಯಾನ 3 ಯೋಜನೆಯ ಭಾಗವಾದ ವಿಕ್ರಮ್‌...

ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ ಪೆರಿಯಾರ್...

ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ...

ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

ಯುಪಿಎ ಸರ್ಕಾರ 2010ರಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ...