ಚಂಡೀಗಢಕ್ಕೆ ಟ್ರಕ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ | ಚಾಲಕರೊಡನೆ ಮಾತುಕತೆ

Date:

Advertisements

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯಿಂದ ಚಂಡೀಗಢಕ್ಕೆ ಸೋಮವಾರ (ಮೇ 22) ರಾತ್ರಿ ಟ್ರಕ್‌ನಲ್ಲಿ ಸಂಚರಿಸಿ ಚಾಲಕರ ಮನವಿಯನ್ನು ಆಲಿಸಿದ್ದಾರೆ.

ಟ್ರಕ್‌ನಲ್ಲಿ ಸಂಚರಿಸುತ್ತ ಚಾಲಕರ ಜತೆ ಮಾತನಾಡಿ ಅವರ ಕಷ್ಟ ಸುಖಗಳಿಗೆ ಕಿವಿಯಾಗಿದ್ದಾರೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

Advertisements

ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿದೆ. “ಟ್ರಕ್‌ ಚಾಲಕರೊಂದಿಗೆ ಜನ ನಾಯಕರಾಗಿರುವ ರಾಹುಲ್‌ ಗಾಂಧಿ ತೆರಳಿ ಅವರ ಕಷ್ಟಗಳನ್ನು ಆಲಿಸುತ್ತ ದೆಹಲಿಯಿಂದ ಚಂಡೀಗಢವರೆಗೆ ಪ್ರಯಾಣಿಸಿದರು. ಮಾಧ್ಯಮಗಳ ವರದಿ ಪ್ರಕಾರ ಭಾರತದಲ್ಲಿ ಸುಮಾರು 90 ಲಕ್ಷ ಟ್ರಕ್‌ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಂಕಷ್ಟಗಳಿವೆ. ಅವರ ಮನದ ಮಾತನ್ನು ರಾಹುಲ್‌ ಅವರು ಆಲಿಸಿದ್ದಾರೆ” ಎಂದು ಬರೆದುಕೊಂಡಿದೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸಿರುವ ವಿಡಿಯೋವನ್ನು ಸಹ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ರಾಹುಲ್‌ ಅವರು ಟ್ರಕ್‌ ಚಾಲಕರೊಂದಿಗೆ ಮಾತನಾಡುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

ರಾಹುಲ್‌ ಅವರು ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಬ್ಲಿಂಕಿಟ್ ಡೆಲಿವರಿ ಎಕ್ಸಿಕ್ಯೂಟಿವ್ ಜೊತೆ ಸವಾರಿ ಮಾಡಿದ್ದರು.

ಈ ವೇಳೆ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದರು. ಸಾಮಾನ್ಯರಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ, ಎಲ್ಲರೊಂದಿಗೆ ಬೆರೆತು ಮಾತುಕತೆಯಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X