ರಾಮ ನವಮಿ ಹಿಂಸಾಚಾರ | ಬಿಹಾರದಲ್ಲಿ ಬಾಲಕ ಸಾವು, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ

Date:

  • ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ರಾಮ ನವಮಿ ಸಂಬಂಧ ಘರ್ಷಣೆ, ಕಟ್ಟೆಚ್ಚರ
  • ಬಿಹಾರದ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡು

ದೇಶದಲ್ಲಿ ರಾಮ ನವಮಿ ಆಚರಣೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ. ಕೋಮು ಹಿಂಸಾಚಾರದಲ್ಲಿ ಬಿಹಾರದಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನಳಂದ ಜಿಲ್ಲೆಯ ಬಿಹಾರ್ ಶರೀಫ್ ನಗರದಲ್ಲಿ ಮಾರ್ಚ್ 31 ರಂದು ರಾಮನ ಉತ್ಸವದಲ್ಲಿ ನಡೆದ ಘರ್ಷಣೆಗಳಿಂದ ಶನಿವಾರ (ಏಪ್ರಿಲ್ 1) ತಡರಾತ್ರಿ ಎರಡು ಗುಂಪುಗಳ ನಡುವೆ ಕೋಮು ಹಿಂಸಾಚಾರ ನಡೆದಿದೆ.

ಹಿಂಸಾಚಾರದಲ್ಲಿ ಹಚ್ಚಿದ ಬೆಂಕಿಯಿಂದ 16 ವರ್ಷದ ಒಬ್ಬ ಬಾಲಕ ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡರು. ತರಕಾರಿ ಖರೀದಿಸಲು ತೆರಳುತ್ತಿದ್ದ ಬಾಲಕ ಹಿಂಸಾಚಾರಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಗುಲ್ಶನ್ ಕುಮಾರ್‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ದಿನಗೂಲಿ ಕಾರ್ಮಿಕರೊಬ್ಬರ ಮಗ ಎಂದು ತಿಳಿದು ಬಂದಿದೆ.

ಬಿಹಾರ್‌ ಶರೀಫ್‌ನ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳು ಪರಸ್ಪರ ಗುಂಡು ಹಾರಿಸಿಕೊಂಡಿವೆ. ಈ ವೇಳೆ ಬಾಲಕನ ತಲೆ ಭಾಗಕ್ಕೆ ಗುಂಡು ತಾಗಿದೆ. ತಕ್ಷಣ ಆತನನ್ನು ಪಾಟ್ನಾ ವೈದ್ಯಕೀಯ ಆಸ್ಪತ್ರೆ ಕರೆದೊಯ್ಯಲಾಗಿದೆ. ಆದರೆ ಬಾಲಕ ಮೃತಪಟ್ಟ ಎಂದು ಪೊಲೀಸರು ಹೇಳಿದರು. ಮೃತ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ₹5 ಲಕ್ಷ ಪರಿಹಾರ ಘೋಷಿಸಿದರು.

ಗಾಯಗೊಂಡವರನ್ನು ಮೊಹಮ್ಮದ್‌ ಶಕಿಲ್‌ (66) ಮತ್ತು ಮೊಹಮ್ಮದ್‌ ತಾಜ್‌ (32) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ವೇಳೆ ಇಬ್ಬರಿಗೂ ಗುಂಡು ತಗುಲಿದೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮ ನವಮಿ ಉತ್ಸವದ ಮೆರವಣಿಗೆಗೆ ಸಂಬಂಧಿಸಿದ ಹಿಂಸಾಚಾರಕ್ಕೆ ಸಾಕ್ಷಿಯಾದ ನಳಂದ ಜಿಲ್ಲೆಯ ಬಿಹಾರ್ ಶರೀಫ್ ಮತ್ತು ರೋಹ್ತಾಸ್ ಜಿಲ್ಲೆಯ ಸಸಾರಾಮ್ ನಗರಗಳಲ್ಲಿ ಭಾನುವಾರವೂ (ಏಪ್ರಿಲ್ 2) ಉದ್ವಿಗ್ನ ವಾತಾವರಣ ಮುಂದುವರಿದಿತ್ತು.

“ಕೋಮು ಹಿಂಸಾಚಾರ ಘಟನೆಗಳ ಬಗ್ಗೆ ನಿಗಾ ವಹಿಸಿ, ಅಪರಾಧಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ” ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲೂ ಹಿಂಸಾಚಾರ

ಬಿಹಾರದ ನಂತರ ಪಶ್ಚಿಮ ಬಂಗಾಳದಲ್ಲೂ ರಾಮ ನವಮಿ ಉತ್ಸವದ ಹಿಂಸಾಚಾರ ಭುಗಿಲೆದ್ದಿದೆ. ಇಲ್ಲಿಯ ಹೂಗ್ಲಿ ನಗರದಲ್ಲಿ ಎರಡು ಗುಂಪುಗಳ ನಡುವೆ ಕೋಮು ಹಿಂಸಾಚಾರ ನಡೆದಿದೆ.

ರಾಮನ ಉತ್ಸವದ ವೇಳೆ ಬಿಜೆಪಿ ಕೈಗೊಂಡ ಶೋಭಾ ಯಾತ್ರೆಯಲ್ಲಿ ಕೋಮು ಹಿಂಸಾಚಾರ ನಡೆದಿದೆ. ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್‌ ಘೋಷ್‌ ಭಾಗವಹಿಸಿದ್ದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕೆಲವು ದುಷ್ಕರ್ಮಿಗಳು ಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದರು. ಇದು ಕೋಮು ಹಿಂಸಾಚಾರದ ಕಿಡಿ ಹೊತ್ತಿಸಿತು.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಗಾಂಧಿ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

ರಾಮ ನವಮಿ ಉತ್ಸವದ ಶೋಭಾ ಯಾತ್ರೆಯಲ್ಲಿ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸಿ ಹಿಂಸಾಚಾರ ಇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಿಂದ ಯಾತ್ರೆಗೆ ತೊಡಕಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿ 12ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರಾಮ ನವಮಿ ಉತ್ಸವಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಹೌರಾ ನಗರದಲ್ಲಿಯೂ ಹಿಂಸಾಚಾರ ನಡೆದಿತ್ತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗಾಗಳಲ್ಲಿ ನಾಯಿ ಮಾಂಸ ಸೇವನೆ ಒಪ್ಪಿತ ಆಹಾರ ಸಂಪ್ರದಾಯ: ಸರ್ಕಾರದ ನಿಷೇಧ ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ಸೇವನೆ ಮತ್ತು ಮಾರಾಟ ನಿಷೇಧಿಸಿ ರಾಜ್ಯ ಸರ್ಕಾರ...

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ: ರಾಜಸ್ಥಾನ ಹೈಕೋರ್ಟ್

ಮಗುವಿನ ಪಿತೃತ್ವ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವ ಅರ್ಜಿಯನ್ನು ತಿರಸ್ಕರಿಸಿದ ರಾಜಸ್ಥಾನ ಹೈಕೋರ್ಟ್,...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ...