ರಾಜಸ್ಥಾನ | ಬೃಹತ್‌ ಸಮಾವೇಶ ನಡೆಸಿದ ಸಚಿನ್‌ ಪೈಲಟ್‌; ಹೊಸ ಪಕ್ಷ ಸ್ಥಾಪನೆಯ ಕುತೂಹಲಕ್ಕೆ ತೆರೆ

Date:

  • 2018ರಲ್ಲಿ ಸರ್ಕಾರ ರಚನೆಯ ನಂತರ ಗೆಹ್ಲೋಟ್‌, ಪೈಲಟ್‌ ನಡುವೆ ಮುನಿಸು
  • ತಂದೆ ರಾಜೇಶ್‌ ಪೈಲಟ್‌ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪೈಲಟ್‌ ಮಾತು

ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ತಮ್ಮ ತಂದೆ ರಾಜೇಶ್‌ ಪೈಲಟ್‌ ಅವರ ಪುಣ್ಯತಿಥಿಯ ಅಂಗವಾಗಿ ರಾಜಸ್ಥಾನದ ಜೈಪುರದ ದೌಸಾದಲ್ಲಿ ಭಾನುವಾರ (ಜೂನ್ 11) ಏರ್ಪಡಿಸಿದ್ದ ಸಮಾವೇಶದಲ್ಲಿ ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಉಂಟಾಗಿದ್ದ ಕುತೂಹಲಕ್ಕೆ ತೆರೆ ಎಳೆದರು.

- Advertisement -

ಸಮಾವೇಶ ಆರಂಭಕ್ಕೂ ಮುನ್ನ ತಮ್ಮ ತಂದೆ ರಾಜೇಶ್‌ ಪೈಲಟ್‌ ಅವರಿಗೆ ಸಚಿನ್‌ ಗೌರವ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾಂಗ್ರೆಸ್‌ನ ಕಾರ್ಯಕರ್ತರು ಗೌರವ ನಮನ ಸಲ್ಲಿಸಿದ ನಂತರ ರಾಜಸ್ಥಾನದ ಉಪಮುಖ್ಯಮಂತ್ರಿಯೂ ಆದ ಸಚಿನ್‌ ಪೈಲಟ್‌ ಅವರು ರಾಜೇಶ್‌ ಪೈಲಟ್‌ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಸಮಾವೇಶದಲ್ಲಿ ಮಾತನಾಡಿದ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದರು.

ರಾಜಸ್ಥಾನ ಅಥವಾ ದೇಶದಲ್ಲಿ ಭಷ್ಟಾಚಾರಯುಕ್ತ ರಾಜಕೀಯಕ್ಕೆ ಅವಕಾಶವಿಲ್ಲ ಎಂದ ಸಚಿನ್‌, ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಕಾರ್ಯಗಳ ಕುರಿತು ಮಾತನಾಡಿದರು.

ಸಚಿನ್‌ ಪೈಲಟ್‌ ಅವರು ಕಾರ್ಯಕ್ರಮದಲ್ಲಿ ಯಾವುದೇ ಪಕ್ಷ ಸ್ಥಾಪನೆಯ ಬಗ್ಗೆ ಮಾತನಾಡಲಿಲ್ಲ.

ಇದೇ ವೇಳೆ ಸಚಿನ್‌ ಅವರು ಅಶೋಕ್‌ ಗೆಹ್ಲೋಟ್‌ ಅವರ ಸರ್ಕಾರದ ಲೋಪಗಳ ಕುರಿತು ಮಾತನಾಡಿದರು.

“ಭಾರತ ಮತ್ತು ರಾಜಸ್ಥಾನದ ರಾಜಕೀಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಇರಬಾರದು. ಇದರಿಂದ ಯುವ ಜನತೆ ಅಸಮಾಧಾನಗೊಂಡರೆ ದೇಶ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ” ಎಂದು ಸಚಿನ್ ಅವರು ಅಶೋಕ್‌ ಗೆಹ್ಲೋಟ್‌ ಅವರ ಆಡಳಿತವನ್ನು ಪರೋಕ್ಷವಾಗಿ ಟೀಕಿಸಿದರು.

“ನಾನು 365 ದಿನವೂ ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂಧರ ರಾಜೆ ಅವರನ್ನು ವಿರೋಧಿಸುತ್ತೇನೆ. ಆದರೆ ಅವರ ವಿರುದ್ಧ ಎಂದಿಗೂ ಅವಹೇಳನಕಾರಿ ಪದಗಳನ್ನು ಬಳಸುವುದಿಲ್ಲ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ಎಂದಿಗೂ ಅವಮಾನಿಸಿಲ್ಲ” ಎಂದು ಸಚಿನ್‌ ಹೇಳಿದರು.

“ನಮ್ಮ ಆಡಳಿತದಲ್ಲಿ ಏನಾದರೂ ಲೋಪವಿದ್ದರೆ ಇತರರನ್ನು ದೂಷಿಸದೆ ಅದನ್ನು ಸರಿಪಡಿಸಿಕೊಳ್ಳಬೇಕು. ಇತರರನ್ನು ಅವಮಾನಿಸಲು ನಾನು ನನ್ನ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ರಾಜಕೀಯದಲ್ಲಿ ನಿಮ್ಮ ಅಭಿಪ್ರಾಯಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ” ಎಂದು ಸಚಿನ್‌ ಅವರು ಗೆಹ್ಲೋಟ್‌ ಸರ್ಕಾರದ ವಿರುದ್ಧದ ಮುನಿಸನ್ನು ಪರೋಕ್ಷವಾಗಿ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? 2022ರ ವಿಶ್ವ ಡಿಜಿಟಲ್ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ | ಕೇಂದ್ರದ ದತ್ತಾಂಶ

ಸಚಿನ್‌ ಪೈಲಟ್‌ ಹಾಗೂ ಅಶೋಕ್ ಗೆಹ್ಲೋಟ್‌ ಅವರ ಜೊತೆ ಕಳೆದ ವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ಚರ್ಚೆ ನಡೆಸಿದ್ದರು.

2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದಾಗಿನಿಂದ ಸಚಿನ್‌ ಹಾಗೂ ಅಶೋಕ್‌ ಗೆಹ್ಲೋಟ್‌ ನಡುವೆ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...