ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳಿಗೆ ಪತ್ರಿಕೆಗಳ ಮೂಲಕ ನೋಟಿಸ್ ನೀಡಲು ಸುಪ್ರೀಂ ಸೂಚನೆ

Date:

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಬಿಡುಗಡೆಯಾದ 11 ಅಪರಾಧಿಗಳ ಪೈಕಿ ಕೆಲವರ ಪ್ರತಿಕ್ರಿಯೆಯನ್ನು ಪಡೆಯಲು ಇಂಗ್ಲಿಷ್ ಮತ್ತು ಗುಜರಾತಿ ಪತ್ರಿಕೆಯಲ್ಲಿ ನೋಟಿಸ್‌ಗಳನ್ನು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮೇ 9) ಸೂಚನೆ ನೀಡಿದೆ. ಅಪರಾಧಿಗಳಿಗೆ ನೋಟಿಸ್ ನೀಡಲು ಅವರ ವಿಳಾಸದಲ್ಲಿ ಕಂಡುಬಂದಿಲ್ಲ ಎಂಬ ದೂರುಗಳಿಗೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ನೋಟಿಸ್‌ ನೀಡಲು ತಿಳಿಸಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್, ಬಿ ವಿ ನಾಗರತ್ನ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠಕ್ಕೆ ತಿಳಿಸಿದ ಬಿಲ್ಕಿಸ್ ಬಾನೊ ಪರ ವಕೀಲೆ ಶೋಭಾ ಗುಪ್ತಾ ಅವರು, ಅಪರಾಧಿಗಳು ಅವರು ತಿಳಿಸಿರುವ ವಿಳಾಸದಲ್ಲಿಲ್ಲದ ಕಾರಣ ಹೊಸ ನೋಟಿಸ್‌ಗಳನ್ನು ನೀಡಲು ಸಾಧ್ಯವಾಗಿಲ್ಲ. ಈ ಹಿಂದೆಯೂ ಸಹ, ಔಪಚಾರಿಕ ನೋಟಿಸ್‌ಗಳನ್ನು ತಲುಪಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಪರಾಧಿಗಳ ಪರ ವಾದ ಮಾಡಿದ ವಕೀಲರು, ತಮ್ಮ ಕಕ್ಷಿದಾರರು ಊರಿನಲ್ಲಿಲ್ಲ, ಆದ್ದರಿಂದ ಅವುಗಳನ್ನು ಸ್ವೀಕರಿಸಲಿಲ್ಲ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ನೋಟಿಸ್‌ಗಳನ್ನು ತಲುಪಿಸಲು ಪೊಲೀಸರಿಗೆ ಸಹ ಸಾಧ್ಯವಾಗಲಿಲ್ಲ ಮತ್ತು ಅವರ ಮನೆಗಳಲ್ಲಿ ಲಭ್ಯವಿರುವ ಸಂಬಂಧಿಕರು ನೋಟಿಸ್‌ಗಳನ್ನು ಸ್ವೀಕರಿಸಲು ಸಿದ್ಧರಿಲ್ಲ. ಆರೋಪಿಗಳು ಬಿಡುಗಡೆಯಾಗಿರುವುದರಿಂದ ಕನಿಷ್ಠ ಹದಿನೈದು ದಿನಗಳಿಗೊಮ್ಮೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ವರದಿ ಮಾಡಬೇಕು ಎಂಬುದು ನಮ್ಮ ಕಾಳಜಿ. ಕ್ರಿಮಿನಲ್ ಪ್ರಕರಣವಿದ್ದರೆ ವಾರಂಟ್ ಹೊರಡಿಸಬಹುದು ಎಂದು ನಿಯಮಗಳು ಸ್ಪಷ್ಟವಾಗಿ ಹೇಳುತ್ತವೆ ಎಂದು ಶೋಭಾ ಗುಪ್ತಾ ಪೀಠದ ಮುಂದೆ ವಾದ ಮಂಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್ ಬಾನೊ ಪ್ರಕರಣ | ಅಪರಾಧಿಗಳಿಗೆ ಕ್ಷಮಾಪಣೆ ಪ್ರಶ್ನಿಸಿ ಅರ್ಜಿ; ಕೇಂದ್ರ, ಗುಜರಾತ್‌ಗೆ ‘ಸುಪ್ರೀಂ’ ನೋಟಿಸ್

2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಹತ್ಯೆ ಪ್ರಕರಣದಲ್ಲಿ ಕಳೆದ ವರ್ಷ 11 ಅಪರಾಧಿಗಳಿಗೆ ನೀಡಲಾದ ಕ್ಷಮಾಪಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9ಕ್ಕೆ ಮುಂದೂಡಿತ್ತು.

ಏಪ್ರಿಲ್ 18ರಂದು, ಸುಪ್ರೀಂ ಕೋರ್ಟ್ ಕಳೆದ ವರ್ಷ 11 ಅಪರಾಧಿಗಳಿಗೆ ನೀಡಲಾದ ಕ್ಷಮಾಪಣೆಯ ಬಗ್ಗೆ ಗುಜರಾತ್ ಸರ್ಕಾರವನ್ನು ಪ್ರಶ್ನಿಸಿತು. ಅಪರಾಧಿಗಳ ಅಕಾಲಿಕ ಬಿಡುಗಡೆಗೆ ಕಾರಣಗಳನ್ನು ಕೇಳಿರುವ ಸುಪ್ರೀಂ ಕೋರ್ಟ್, ಅವರ ಸೆರೆವಾಸದ ಅವಧಿಯಲ್ಲಿ ಅವರಿಗೆ ನೀಡಲಾದ ಪೆರೋಲ್ ಅನ್ನು ಸಹ ಪ್ರಶ್ನಿಸಿದೆ.

ಮಾರ್ಚ್ 27ರಂದು, ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಮತ್ತು 2002ರ ಗೋಧ್ರಾ ಗಲಭೆಯ ಸಮಯದಲ್ಲಿ ಅವರ ಕುಟುಂಬ ಸದಸ್ಯರ ಹತ್ಯೆಯನ್ನು “ಭಯಾನಕ” ಕೃತ್ಯ ಎಂದು ಆಘಾತ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಇತರ ಕೊಲೆ ಪ್ರಕರಣಗಳಲ್ಲಿ ಅನುಸರಿಸಿದಂತೆ ಏಕರೂಪದ ಮಾನದಂಡಗಳನ್ನು ಹೊಂದಿದೆಯೇ ಎಂದು ಗುಜರಾತ್ ಸರ್ಕಾರವನ್ನು ಕೇಳಿತ್ತು.

ಬಿಲ್ಕಿಸ್ ಬಾನೊ ಅತ್ಯಾಚಾರದ ಎಲ್ಲಾ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ವಿನಾಯಿತಿ ನೀಡಿದ ಕಾರಣ, ಕಳೆದ ವರ್ಷ ಆಗಸ್ಟ್ 15ರಂದು ಆರೋಪಿಗಳೆಲ್ಲರೂ ಬಿಡುಗಡೆಯಾಗಿದ್ದರು.

ಗೋಧ್ರಾ ರೈಲು ದುರಂತದ ನಂತರ ಭುಗಿಲೆದ್ದ ಹಿಂಸಾಚಾರದಿಂದ ತಪ್ಪಿಸಿಕೊಳ್ಳುವಾಗ ಬಾನೊ ಅವರು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಆಗ ಅವರಿಗೆ 21 ವರ್ಷ ವಯಸ್ಸಾಗಿತ್ತು. ಅಲ್ಲದೆ ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಸಾವನ್ನಪ್ಪಿದ ಅವರ ಕುಟುಂಬದ ಏಳು ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಅಪರಾಧಿಗಳ ಬಿಡುಗಡೆ ವಿರುದ್ಧ ಸಿಪಿಐಎಂ ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್, ಲಖನೌ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಮತ್ತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ...