ಉತ್ತರ, ಮಧ್ಯಭಾರತದಲ್ಲಿ ಶಾಖದ ಅಲೆ ಎಚ್ಚರಿಕೆ; ಕೆಲವು ರಾಜ್ಯಗಳಲ್ಲಿ ಶಾಲೆಗಳು ಬಂದ್

Date:

Advertisements
  • ಶಾಖದ ಅಲೆ ಸ್ಥಿತಿಯಿಂದ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ
  • ಅಸ್ಸಾಂ, ಮೇಘಾಲಯಕ್ಕೆ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿ

ಭಾರತದ ಅನೇಕ ಭಾಗಗಳಲ್ಲಿ ಶಾಖದ ಅಲೆ ಪ್ರಮಾಣ ಹೆಚ್ಚಿದ್ದು, ವಾಯುವ್ಯ ಭಾಗದಲ್ಲಿ ಭಾನುವಾರ (ಮೇ 21) 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ದೆಹಲಿ-ಎನ್‌ಸಿಆರ್‌ ಸೇರಿದಂತೆ ದೆಹಲಿ, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರಪ್ರದೇಶ, ಪಶ್ಚಿಮ ರಾಜಸ್ಥಾನ, ಪೂರ್ವ ಉತ್ತರಪ್ರದೇಶ, ಜಾರ್ಖಂಡ್‌, ಪೂರ್ವ ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಶಾಖದ ಅಲೆಗಳಿಗೆ ಸಾಕ್ಷಿಯಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಮುಂದಿನ ಮೂರು ದಿನಗಳಲ್ಲಿ ವಾಯುವ್ಯ ಭಾರತದ ಭಾಗಗಳಲ್ಲಿ ಶಾಖದ ಅಲೆ ಪ್ರಮಾಣದಿಂದ 2-3 ಡಿಗ್ರಿ ತಾಪಮಾನ ಹೆಚ್ಚಲಿದ್ದು, ಭಾರತದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಇರಲಿದೆ. ಯಾವುದೇ ಮಹತ್ವದ ಬದಲಾವಣೆ ಕಂಡು ಬರುವುದಿಲ್ಲ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಮೇ 24ರಿಂದ ಬೀಸುವ ಪಶ್ಚಿಮ ಮಾರುತಗಳಿಂದ ಗರಿಷ್ಠ ತಾಪಮಾನದಲ್ಲಿ 3-5 ಡಿಗ್ರಿ ಕುಸಿತವಾಗಲಿದೆ. ಇದರಿಂದ ಶಾಖದ ಹವಾಮಾನ ತುಸು ತಗ್ಗಲಿದೆ. ಈ ವೇಳೆ ಮೂರರಿಂದ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಅಲ್ಲದೆ ಮೋಡ ಮುಸುಕಿದ ವಾತಾವರಣ ಇರಲಿದೆ.

ಶಾಖದ ಅಲೆಗಳ ಪರಿಸ್ಥಿತಿಯ ಎಚ್ಚರಿಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಶಾಲೆಗಳನ್ನು ಬಂದ್‌ ಮಾಡಲಾಗಿದೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಭಾನುವಾರ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ನಜರ್‌ಗಢದಲ್ಲಿಯೂ ಗರಿಷ್ಠ 46.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಸ್ಸಾಂ | ಶಾಲಾ ಶಿಕ್ಷಕರು ಜೀನ್ಸ್ ಧರಿಸದಂತೆ ವಸ್ತ್ರ ಸಂಹಿತೆ ಹೊರಡಿಸಿದ ಸರ್ಕಾರ

ಶಾಖದ ಅಲೆ ಪ್ರಮಾಣ ಕರಾವಳಿಯ ಭಾಗಗಳಾದ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕೇರಳ ಹಾಗೂ ಮಾಹೆಗಳಲ್ಲೂ ಹೆಚ್ಚಾಗಿದ್ದು, ಗರಿಷ್ಠ ತಾಪಮಾನದ ವಾತಾವರಣವಿದೆ ಎಂದು ಐಎಂಡಿ ಹೇಳಿದೆ.

ಅಲ್ಲದೆ ಅಸ್ಸಾಂ ಹಾಗೂ ಮೇಘಾಲಯದಲ್ಲಿ ಸೋಮವಾರ ಭಾರೀ ಮಳೆ ಉಂಟಾಗಲಿದೆ. ಮುಂದಿನ ದಿನಗಳಲ್ಲಿಯೂ ಭಾರತದ ಕೆಲವು ಭಾಗಗಳಲ್ಲಿ ಮಳೆ ಸುರಿಯಬಹುದು. ಕೆಲವೆಡೆ ಗರಿಷ್ಠ ತಾಪಮಾನವೂ ದಾಖಲಾಗಲಿದೆ ಎಂದು ಐಎಂಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X