ಅದಾನಿ- ಹಿಂಡನ್‌ಬರ್ಗ್ ಪ್ರಕರಣ | ಸೆಬಿಗೆ ಹೆಚ್ಚುವರಿ ಆರು ತಿಂಗಳು ನೀಡದ ಸುಪ್ರೀಂ ಕೋರ್ಟ್‌

Date:

  • ಅದಾನಿ- ಹಿಂಡನ್‌ಬರ್ಗ್ ಪ್ರಕರಣ ತನಿಖೆಗೆ ಹೆಚ್ಚುವರಿ ಕಾಲಾವಕಾಶವಿಲ್ಲ
  • ಆಗಸ್ಟ್‌ವರೆಗೆ ಸಮಯಾವಕಾಶ ನೀಡಬಹುದು ಎಂದ ಸುಪ್ರೀಂಕೋರ್ಟ್‌

ಹಣಕಾಸು ದುರ್ವ್ಯವಹಾರಗಳಿಗೆ ಸಂಬಂಧಿಸಿ ಅದಾನಿ- ಹಿಂಡನ್‌ಬರ್ಗ್ ಪ್ರಕರಣದ ತನಿಖೆಗೆ ಭಾರತೀಯ ಷೇರು ವಿನಿಮಯ ಮಂಡಳಿ ಅಥವಾ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (ಸೆಬಿ) ಹೆಚ್ಚುವರಿ ಆರು ತಿಂಗಳ ಕಾಲಾವಕಾಶ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

“ಈ ಹೊತ್ತಿನಲ್ಲಿ ಆರು ತಿಂಗಳ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಮಾಡುವ ಕೆಲಸದಲ್ಲಿ ಚುರುಕುತನ ಇರಬೇಕು. ತಂಡವನ್ನು ರಚಿಸಿ. ಆಗಸ್ಟ್ ಮಧ್ಯಭಾಗದವರೆಗೂ ಸಮಯ ಕೊಡಬಹುದು. ಅದರೊಳಗೆ ವರದಿ ಸಲ್ಲಿಸಿ. ಆರು ತಿಂಗಳನ್ನು ಕನಿಷ್ಠ ಸಮಯವಾಗಿ ನೀಡಲು ಸಾಧ್ಯವಿಲ್ಲ. ಸೆಬಿ ಅನಿರ್ದಿಷ್ಟಾವಧಿ ಧೀರ್ಘ ಸಮಯ ತೆಗೆದುಕೊಳ್ಳಬಾರದು ಮತ್ತು ಅವರಿಗೆ 3 ತಿಂಗಳು ಕೊಡಬಹುದು” ಎಂದು ಭಾರತೀಯ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ನೋಂದಣಿ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ (ನಿವೃತ್ತ) ಎ ಎಂ ಸಪ್ರೆ ಸಮಿತಿಯಿಂದ ವರದಿಯನ್ನು ಪಡೆದುಕೊಂಡಿರುವುದನ್ನು ವಿಚಾರಣೆ ಸಂದರ್ಭ ದೃಢಪಡಿಸಿದೆ. ಸಮಿತಿಯ ವರದಿ ಪರಿಗಣಿಸಿದ ನಂತರ, ತನಿಖೆಗೆ ಅವಧಿ ವಿಸ್ತರಣೆ ಕೋರಿದ ಅರ್ಜಿ ಬಗ್ಗೆ ಮೇ 15ರಂದು ತೀರ್ಮಾನ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.  

ಅದಾನಿ ಸಮೂಹದ ಮೇಲಿನ ಹಣಕಾಸು ದುರ್ವ್ಯವಹಾರಗಳ ಆರೋಪದ ತನಿಖೆ ನಡೆಸಲು ಆರು ತಿಂಗಳ ಕಾಲ ಅವಧಿಯನ್ನು ವಿಸ್ತರಿಸಬೇಕು ಎಂದು ಸೆಬಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲ ಅವರಿದ್ದ ನ್ಯಾಯ ಪೀಠವು ಶುಕ್ರವಾರ ವಿಚಾರಣೆ ನಡೆಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ 'ಎಷ್ಟು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ...

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...