ಬಿಲ್ಕಿಸ್ ಬಾನೊ ಪ್ರಕರಣ | ಅಪರಾಧಿಗಳಿಗೆ ಕ್ಷಮಾಪಣೆ ಪ್ರಶ್ನಿಸಿ ಅರ್ಜಿ; ಕೇಂದ್ರ, ಗುಜರಾತ್‌ಗೆ ‘ಸುಪ್ರೀಂ’ ನೋಟಿಸ್

Date:

  • ನ್ಯಾ. ಕೆ ಎಂ ಜೋಸೆಫ್, ನ್ಯಾ.ಬಿ ವಿ ನಾಗರತ್ನ ಪೀಠ ವಿಚಾರಣೆ
  • ಪ್ರಕರಣದ 11 ಆರೋಪಿಗಳಿಗೆ ಕ್ಷಮೆ ನೀಡಿದ್ದ ಗುಜರಾತ್ ಸರ್ಕಾರ

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬಂಧನದಿಂದ ಕ್ಷಮಾದಾನ ನೀಡಿರುವ ಬಗ್ಗೆ ಸೂಕ್ತ ವಿವರಣೆ ಕೇಳಿ ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 27) ಕೇಂದ್ರ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ. ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 11 ಆರೋಪಿಗಳಿಗೆ ಕ್ಷಮಾದಾನ ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನೊ ಎರಡು ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್‌ ಹಾಗೂ ಬಿ ವಿ ನಾಗರತ್ನ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು.

ಏಪ್ರಿಲ್ 18ರಂದು ವಿಚಾರಣೆ ಮಾಡುವಾಗ ಆರೋಪಿಗಳಿಗೆ ಕ್ಷಮಾದಾನ ನೀಡಿರುವ ಕುರಿತು ಸೂಕ್ತ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರೋಪಿಗಳ ಬಿಡುಗಡೆ ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನೊ ಅವರು ಸುಪ್ರೀಂ ಕೋರ್ಟ್‌ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು.ಮೊದಲನೇ ಅರ್ಜಿಯು, ಅಪರಾಧಿಗಳ ಬಿಡುಗಡೆಯ ವಿನಂತಿ ಪರಿಗಣನೆಯನ್ನು ಕಡ್ಡಾಯಗೊಳಿಸುವ ಗುಜರಾತ್‌ ಸರ್ಕಾರಕ್ಕೆ 2022ರ ಮೇನಲ್ಲಿ ನೀಡಿರುವ ತನ್ನ ತೀರ್ಪನ್ನು ಮರುಪರಿಶೀಲಿಸಲು ಕೋರಿದೆ.

ಮಾರ್ಚ್‌ 22 ರಂದು ವಕೀಲ ಗುಪ್ತಾ ಅವರು ಬಿಲ್ಕಿಸ್‌ ಬಾನೊ ಅವರ ವಿಷಯವನ್ನು ತುರ್ತು ವಿಚಾರಣೆಗಾಗಿ ಪ್ರಸ್ತಾಪಿಸಿದರು. ಆದರೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರು ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದರು. ಅರ್ಜಿ ವಿಚಾರಣೆಗೆ ನೂತನ ಪೀಠ ರಚನೆ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರ ಪೀಠ ಈ ಹಿಂದೆ ಬಿಲ್ಕಿಸ್‌ ಬಾನೊ ಅವರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಆದೇಶಿಸಿತ್ತು.

2002ರ ಗೋಧ್ರೋತ್ತರ ಹಿಂಸಾಚಾರದ ವೇಳೆ ಆರೋಪಿಗಳು ಬಿಲ್ಕಿಸ್‌ ಬಾನೊ ಅವರ ಮೇಲೆ ಅತ್ಯಾಚಾರ ನಡೆಸಿ ಬಿಲ್ಕಿಸ್‌ ಅವರ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದರು.

ಈ ಪ್ರಕರಣದಲ್ಲಿ ಜೈಲು ಸೇರಿದ್ದ 11 ಆರೋಪಿಗಳಿಗೆ ಗುಜರಾತ್‌ ಸರ್ಕಾರ ಕಳೆದ ವರ್ಷ ಆಗಸ್ಟ್‌ 10 ರಂದು ಕ್ಷಮಾದಾನ ನೀಡಿತ್ತು. ಆಗಸ್ಟ್‌ 15 ರಂದು ಆರೋಪಿಗಳು ಬಿಡುಗಡೆಯಾಗಿದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...