‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Date:

  • ವಿವಾದಿತ ‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ
  • ಅರ್ಜಿ ಸಲ್ಲಿಸಿದ್ದ ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆ

ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿರುವ ಬಾಲಿವುಡ್‌ ಸಿನಿಮಾ  ”ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಶುಕ್ರವಾರ, ಮೇ 5ರಂದು ತೆರೆಗೆ ಬರಲು ಸಿದ್ಧವಾಗಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ದ್ವೇಷಪೂರಿತ ಸಂಭಾಷಣೆಗಳನ್ನು ಒಳಗೊಂಡಿದೆ. ಇದೊಂದು ‘ಪ್ರಚಾರಾಭಿಯಾನಕ್ಕಾಗಿ ನಿರ್ಮಿಸಿದ ಸಿನಿಮಾ’ವಾಗಿರುವುದರಿಂದ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಜಮಿಯತ್ ಉಲಮಾ-ಇ-ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್​ ಸಿಬಲ್​ ಹಾಗೂ ನಿಜಾಮ್ ಪಾಷಾ ಈ ಚಿತ್ರವು ದ್ವೇಷ ಭಾಷಣದ ದೃಶ್ಯ ರೂಪದ ಪ್ರಚಾರ. ಚಿತ್ರ ಈ ಶುಕ್ರವಾರ ಬಿಡುಗಡೆ ಆಗುತ್ತಿರುವ ಕಾರಣ ನಾವು ಸುಪ್ರೀಂ ಕೋರ್ಟ್​ನಲ್ಲಿ ಮೊಕದ್ದಮೆ ಹೂಡಿದ್ದೇವೆ. ದ್ವೇಷ ಭಾಷಣದ ವಿಚಾರವಾಗಿ ಸುಪ್ರೀಂ ಕೋರ್ಟ್​ ಮಧ್ಯಸ್ಥಿಕೆಗಾಗಿ ಅರ್ಜಿ ಸಲ್ಲಿಸಿರುವುದಾಗಿ ಹೇಳಿದರು.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಎನ್‌ಸಿಪಿ ಅಧ್ಯಕ್ಷ ಸ್ಥಾನ ತೊರೆಯುವ ನಿರ್ಧಾರ ಪ್ರಕಟಿಸಿದ ಶರದ್‌ ಪವಾರ್‌

ಅರ್ಜಿದಾರರ ವಾದ ಆಲಿಸಿದ ಜಸ್ಟಿಸ್​ ಕೆ ಎಂ ಜೋಸೆಫ್​ ಹಾಗೂ ಬಿ ವಿ ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು, “ದ್ವೇಷ ಭಾಷಣಗಳಲ್ಲಿ ವೈವಿಧ್ಯತೆ ಇದೆ.  ಒಬ್ಬ ವ್ಯಕ್ತಿ ವೇದಿಕೆಯನ್ನು ಏರಿ ಭಾಷಣ ಮಾಡಿದಂತಲ್ಲ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಕ್ಕಿದೆ. ಮೊದಲು ನೀವು ಮಂಡಳಿಯನ್ನು ಪ್ರಶ್ನಿಸಿ ಆ ನಂತರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬೇಕು” ಎಂದು ಹೇಳಿತು.

ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸುವ ಮೊದಲು ನೀವು ಹೈಕೋರ್ಟ್​ಗೆ ಹೋಗಬೇಕಿತ್ತು, ಇದೇನು ಮೈದಾನವಲ್ಲ. ಇಲ್ಲಿದ್ದರೆ ಎಲ್ಲರೂ ಸುಪ್ರೀಂ ಕೋರ್ಟ್​ಗೆ ಬರಲು ಪ್ರಾರಂಭಿಸುತ್ತಾರೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...