ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

  • ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ
  • ಪರಮಾಧಿಕಾರ ಬಳಸಿ ವಿಚ್ಚೇದನ ಊರ್ಜಿತ

ಹಿಂದೂ ವಿವಾಹ ಕಾಯ್ದೆಯಡಿಯ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ʻದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು  ಕಾಯದೇ ವಿಚ್ಛೇದನ ಪಡೆಯಬಹುದು. ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ಇಲ್ಲದೆಯೇ ಸುಪ್ರೀಂ ಕೋರ್ಟ್​ ತನ್ನ ಪರಮಾಧಿಕಾರ ಬಳಸಿ ವಿಚ್ಛೇದನವನ್ನು ಊರ್ಜಿತಗೊಳಿಸಬಹುದುʼ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಹಾಗೂ ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ; ಕನ್ನಡಿಗ ಸೇರಿದಂತೆ ಮೂವರ ಬಂಧನ

ʻದಂಪತಿ ನಡುವಿನ ವೈವಾಹಿಕ ಜೀವನವನ್ನು ಮತ್ತೆ ಸರಿಪಡಿಸಲಾಗದ ಸನ್ನಿವೇಶವಿದ್ದರೆʼ ಸುಪ್ರೀಂ ಕೋರ್ಟ್​ ಆ ಜೋಡಿಗೆ ವಿಚ್ಛೇದನ ನೀಡಬಹುದು. ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ನೀಡಲಾದ ವಿಶೇಷಾಧಿಕಾರದ ಮೂಲಕ ವಿವಾಹವನ್ನು ಅನೂರ್ಜಿತಗೊಳಿಸುವ ಅವಕಾಶ ಸುಪ್ರೀಂ ಕೋರ್ಟ್‌ಗೆ ಇದೆʼ ಎಂದು ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಕೋರಿದ ದಂಪತಿಗೆ 6 ತಿಂಗಳ ಒಳಗೇ ಕೆಲವು ಷರತ್ತುಗಳಿಗೆ ಒಳಪಟ್ಟು ವಿಚ್ಛೇದನ ನೀಡಬಹುದು ಎಂದು ಐವರು ಸದಸ್ಯರ ಸಾಂವಿಧಾನಿಕ ಪೀಠ ಹೇಳಿದೆ.

ವಿಚ್ಛೇದನದ ಬಳಿಕ ಜೀವನ ನಿರ್ವಹಣೆ, ಜೀವನಾಂಶ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಹೇಗೆ ಸಮತೋಲನ ಸಾಧಿಸಬೇಕು ಎಂಬುದನ್ನೂ ಪೀಠವು ಆದೇಶದಲ್ಲಿ ವಿವರಿಸಿದೆ.

2014ರಲ್ಲಿ ಶಿಲ್ಪಾ ಸೈಲೇಶ್ ಸಲ್ಲಿಸಿದ್ದ ಪ್ರಮುಖ ಅರ್ಜಿ ಸೇರಿ ಐದು ಅರ್ಜಿಗಳ ಹೆಚ್ಚಿನ ವಿಚಾರಣೆಗಾಗಿ ಪ್ರಕರಣವನ್ನು 2016 ರ ಜೂನ್ 29 ರಂದು ಐವರು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು. 2022ರ ಸೆಪ್ಟೆಂಬರ್ 29ರಂದು ಸುಪ್ರೀಂನ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಸೋಮವಾರ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಕಡ್ಡಾಯವಾಗಿ 6 ತಿಂಗಳು ಕಾಯುವ ಅವಶ್ಯಕತೆಯಿಲ್ಲ ಎಂದು ಹೇಳಿದೆ.

ವಿಚ್ಛೇದನ ಪ್ರಕ್ರಿಯೆ ಹೇಗಿದೆ?: ಹಿಂದೂ ವಿವಾಹ ಕಾಯಿದೆ 1955 ರ ಸೆಕ್ಷನ್ 13 ಬಿ ಪ್ರಕಾರ ದಂಪತಿ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ವಿಚ್ಛೇದನದ ಪ್ರಕರಣಗಳಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಸೂಚಿಸಿ, ಅರ್ಜಿ ಸಲ್ಲಿಸಿದ ಬಳಿಕ 6 ತಿಂಗಳು ಕಾಯುವ ಅವಧಿ ಕಾನೂನಿನಲ್ಲಿ ಕಡ್ಡಾಯವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...