ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

Date:

  • ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಬಾಂಬೆ ವಕೀಲರ ಸಂಘದಿಂದ ಸುಪ್ರೀಂಗೆ ಅರ್ಜಿ
  • ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದ ಕಿರಣ್‌ ರಿಜಿಜು

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ವಿವಾದಾತ್ಮಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ನ 350ಕ್ಕೂ ಹೆಚ್ಚು ವಕೀಲರು ಖಂಡಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ “ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್‌ಗೆ ಸೇರಿದವರು” ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು. ಕಾನೂನು ಸಚಿವರ ಹೇಳಿಕೆಯನ್ನು ಖಂಡಿಸಿರುವ ವಕೀಲರು, “ಇಂತಹ ದಬ್ಬಾಳಿಕೆ ಮತ್ತು ಬೆದರಿಸುವುದು ಸಚಿವರ ಉನ್ನತ ಹುದ್ದೆಗೆ ತಕ್ಕುದಲ್ಲ” ಎಂದು ಹೇಳಿದ್ದಾರೆ.

ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಸುಪ್ರೀಂಗೆ ಅರ್ಜಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಮತ್ತು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ ನಿರ್ಣಯ ಪ್ರಶ್ನಿಸಿ, ಸಂಘವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಈ ಸುದ್ದಿ ಓದಿದ್ದೀರಾ? ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

“ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ” ಎಂದು ಕಿರಣ್‌ ರಿಜಿಜು ಹೇಳಿದ್ದರೆ, 1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಕೆಟ್ಟ ನಿದರ್ಶನವೆಂದು ಉಪರಾಷ್ಟ್ರಪತಿ ಜರೆದಿದ್ದರು. ಈ ಹಿನ್ನಲೆಯಲ್ಲಿ ಇವರಿಬ್ಬರಿಗೂ ದೇಶದ ನ್ಯಾಯಾಂಗ ಮತ್ತು ಸಂವಿಧಾನದ ಬಗ್ಗೆ ನಂಬಿಕೆ ಇಲ್ಲವೆಂದು ಆರೋಪಿಸಿ, ಇವರಿಬ್ಬರ ಪದಚ್ಯುತಿ ಕೋರಿ ವಕೀಲರ ಸಂಘ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಬಾಂಬೆ ವಕೀಲರ ಸಂಘದ ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜಯ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಸಂದೀಪ್ ವಿ ಮಾರ್ನೆ ಅವರ ವಿಭಾಗೀಯ ಪೀಠವು “ಭಾರತದ ಸುಪ್ರೀಂಕೋರ್ಟ್‌ನ ವಿಶ್ವಾಸಾರ್ಹತೆ ಉನ್ನತ ಹಂತದಲ್ಲಿದೆ ಮತ್ತು ಅದನ್ನು ವ್ಯಕ್ತಿಗಳ ಹೇಳಿಕೆಗಳಿಂದ ನಾಶಗೊಳಿಸಲಾಗುವುದಿಲ್ಲ ಅಥವಾ ಅಡ್ಡಿಪಡಿಸಲಾಗುವುದಿಲ್ಲ” ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...