ಕಿರಣ್‌ ರಿಜಿಜು ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್‌, ಹೈಕೋರ್ಟ್ ವಕೀಲರಿಂದ ಖಂಡನೆ

Date:

  • ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಬಾಂಬೆ ವಕೀಲರ ಸಂಘದಿಂದ ಸುಪ್ರೀಂಗೆ ಅರ್ಜಿ
  • ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಹೇಳಿದ್ದ ಕಿರಣ್‌ ರಿಜಿಜು

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ವಿವಾದಾತ್ಮಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ನ 350ಕ್ಕೂ ಹೆಚ್ಚು ವಕೀಲರು ಖಂಡಿಸಿದ್ದಾರೆ.

- Advertisement -

ಕೆಲವು ದಿನಗಳ ಹಿಂದಷ್ಟೆ “ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್‌ಗೆ ಸೇರಿದವರು” ಎಂದು ಕಿರಣ್ ರಿಜಿಜು ಹೇಳಿಕೆ ನೀಡಿದ್ದರು. ಕಾನೂನು ಸಚಿವರ ಹೇಳಿಕೆಯನ್ನು ಖಂಡಿಸಿರುವ ವಕೀಲರು, “ಇಂತಹ ದಬ್ಬಾಳಿಕೆ ಮತ್ತು ಬೆದರಿಸುವುದು ಸಚಿವರ ಉನ್ನತ ಹುದ್ದೆಗೆ ತಕ್ಕುದಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಿರಣ್‌ ರಿಜಿಜು, ಉಪರಾಷ್ಟ್ರಪತಿ ವಿರುದ್ಧ ಸುಪ್ರೀಂಗೆ ಅರ್ಜಿ

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಮತ್ತು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ ನಿರ್ಣಯ ಪ್ರಶ್ನಿಸಿ, ಸಂಘವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಈ ಸುದ್ದಿ ಓದಿದ್ದೀರಾ? ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

“ಕೊಲಿಜಿಯಂನ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿಲ್ಲ” ಎಂದು ಕಿರಣ್‌ ರಿಜಿಜು ಹೇಳಿದ್ದರೆ, 1973ರ ಕೇಶವಾನಂದ ಭಾರತಿ ಪ್ರಕರಣದ ತೀರ್ಪನ್ನು ಕೆಟ್ಟ ನಿದರ್ಶನವೆಂದು ಉಪರಾಷ್ಟ್ರಪತಿ ಜರೆದಿದ್ದರು. ಈ ಹಿನ್ನಲೆಯಲ್ಲಿ ಇವರಿಬ್ಬರಿಗೂ ದೇಶದ ನ್ಯಾಯಾಂಗ ಮತ್ತು ಸಂವಿಧಾನದ ಬಗ್ಗೆ ನಂಬಿಕೆ ಇಲ್ಲವೆಂದು ಆರೋಪಿಸಿ, ಇವರಿಬ್ಬರ ಪದಚ್ಯುತಿ ಕೋರಿ ವಕೀಲರ ಸಂಘ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಬಾಂಬೆ ವಕೀಲರ ಸಂಘದ ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜಯ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಸಂದೀಪ್ ವಿ ಮಾರ್ನೆ ಅವರ ವಿಭಾಗೀಯ ಪೀಠವು “ಭಾರತದ ಸುಪ್ರೀಂಕೋರ್ಟ್‌ನ ವಿಶ್ವಾಸಾರ್ಹತೆ ಉನ್ನತ ಹಂತದಲ್ಲಿದೆ ಮತ್ತು ಅದನ್ನು ವ್ಯಕ್ತಿಗಳ ಹೇಳಿಕೆಗಳಿಂದ ನಾಶಗೊಳಿಸಲಾಗುವುದಿಲ್ಲ ಅಥವಾ ಅಡ್ಡಿಪಡಿಸಲಾಗುವುದಿಲ್ಲ” ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...