ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

Date:

Advertisements

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು.

ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು ನಿರ್ಣಯವನ್ನು ಸ್ಪೀಕರ್ ಅಪ್ಪಾವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿರುವುದಾಗಿ ಪ್ರಕಟಿಸಿದರು.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನಿರ್ಣಯವನ್ನು ಮಂಡಿಸಿದರು ಮತ್ತು ಕರ್ನಾಟಕವು “ಕೃತಕ ಬಿಕ್ಕಟ್ಟು” ಸೃಷ್ಟಿಸಿದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನದಿಯಿಂದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

Advertisements

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಉಭಯ ಪಕ್ಷಗಳ ನಡುವೆ ನಡೆದ ತೀವ್ರ ಚರ್ಚೆಯ ನಂತರ ನಿರ್ಣಯವನ್ನು ಅಂಗೀಕರಿಸಲಾಯಿತು. ಆದಾಗ್ಯೂ, ಎಐಎಡಿಎಂಕೆ ನಿರ್ಣಯವನ್ನು ಬೆಂಬಲಿಸಿತು.

ಈ ಸುದ್ದಿ ಓದಿದ್ದೀರಾ? Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಅಂತರರಾಜ್ಯ ನದಿ ವಿವಾದಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಆಡಳಿತ ಕೈಗೊಂಡಿರುವ ವಿವಿಧ ಸಾಧನೆಗಳನ್ನು ಸ್ಮರಿಸಿದ ಪಳನಿಸ್ವಾಮಿ, ಈ ವಿಷಯದ ಬಗ್ಗೆ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಹೇರಬೇಕು ಎಂದು ರಾಜ್ಯ ರ್ಕಾರವನ್ನು ಆಗ್ರಹಿಸಿದರು.

ಕೆಲವು ವರ್ಷಗಳ ಹಿಂದೆ ತಮ್ಮ ಪಕ್ಷವು ಈ ವಿಷಯಕ್ಕಾಗಿ ಸಂಸತ್ತನ್ನು ಕೆಲವು ದಿನಗಳ ಕಾಲ ಸ್ಥಗಿತಗೊಳಿಸಿತ್ತು ಎಂದು ಎಡಪ್ಪಾಡಿ ಕೆ ಪಳನಿಸ್ವಾಮಿ ನೆನಪಿಸಿಕೊಂಡರು.

ಈ ನಿರ್ಣಯವು ಕಾವೇರಿ ವಿವಾದಕ್ಕೆ ಸಮಗ್ರ ಮತ್ತು ಸಂಪೂರ್ಣ ಪರಿಹಾರದ ಗುರಿಯನ್ನು ತೋರುತ್ತಿಲ್ಲ ಮತ್ತು ನಿರ್ಣಯಕ್ಕೆ ತಾನು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ಸೇರಿಸುವ ಬಗ್ಗೆ ಸರ್ಕಾರ ಯಾವುದೇ ಭರವಸೆ ನೀಡದ ಕಾರಣ ಬಿಜೆಪಿ ಸದಸ್ಯರು ಸಬಾತ್ಯಾಗ ಮಾಡಿದರು.

ವಿಧಾನಸಭೆ ಅಂಗೀಕರಿಸಿದ ತಿದ್ದುಪಡಿಗಳು ನದಿಗಳ ರಾಷ್ಟ್ರೀಕರಣ ಮತ್ತು ಕೇಂದ್ರದ ಅಣೆಕಟ್ಟು ಸುರಕ್ಷತಾ ಮಸೂದೆಗೆ ಬೆಂಬಲವನ್ನು ಒಳಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X