ರಾಜಸ್ಥಾನ : ಮೀಸಲಿಟ್ಟ ನೀರು ಕುಡಿದ ದಲಿತ ವಿದ್ಯಾರ್ಥಿಯ ಮೇಲೆ ಶಿಕ್ಷಕ ಹಲ್ಲೆ

Date:

ಶಿಕ್ಷಕರಿಗೆ ಮೀಸಲಿಟ್ಟ ನೀರನ್ನು ಕುಡಿದ ಕಾರಣಕ್ಕಾಗಿ ಶಿಕ್ಷಕನೊಬ್ಬ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

7ನೇ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿ ಶಿಕ್ಷಕರಿಗೆ ಮೀಸಲಿಟ್ಟಿದ್ದ ನೀರು ಕುಡಿದಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕ ಗಂಗಾರಾಮ್ ಗುರ್ಜರ್ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆ ನಡೆದ ನಂತರ ಆಕ್ರೋಶಗೊಂಡ ವಿದ್ಯಾರ್ಥಿಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಸೇರಿ ನೂರಕ್ಕೂ ಹೆಚ್ಚು ಜನರು ಶಾಲೆಗೆ ಆಗಮಿಸಿ ಆರೋಪಿ ಶಿಕ್ಷಕ ಗಂಗಾರಾಮ್ ಗುರ್ಜರ್‌ನನ್ನು ತರಾಟೆಗೆ ತೆಗೆದುಕೊಂಡರು.

ಘಟನೆಯ ವಿಕೋಪವನ್ನು ಅರಿತ ಪೊಲೀಸರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ಜನಸಂದಣಿಯಿಂದ ರಕ್ಷಿಸಿ ಠಾಣೆಗೆ ಕರೆದೊಯ್ದರು. ನಂತರ ಪೋಷಕರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದಾರಾ? ತಕ್ಕ ಬೆಲೆ ತೆರುತ್ತಾರೆ: ‘ಇಂಡಿಯಾ’ ಹಾಗೂ ‘ಭಾರತ’ ವಿವಾದದ ಬಗ್ಗೆ ರಾಹುಲ್‌ ಕಿಡಿ

“ಬೆಳಗಿನ ಶಾಲಾ ಪ್ರಾರ್ಥನೆಯನ್ನು ಮುಗಿಸಿದ ನಂತರ ಹಲ್ಲೆಗೊಳಗಾದ ವಿದ್ಯಾರ್ಥಿ ಒಳಗೊಂಡು ಕೆಲವು ವಿದ್ಯಾರ್ಥಿಗಳು ಶಿಕ್ಷಕರಿಗೆ ಮೀಸಲಿಟ್ಟಿದ್ದ ನೀರನ್ನು ಆಕಸ್ಮಿಕವಾಗಿ ಕುಡಿದಿದ್ದಾರೆ. ಉಳಿದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ದಲಿತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗೆ ಮಾತ್ರ ಶಿಕ್ಷಕ ಗಂಗಾರಾಮ್ ಗುರ್ಜರ್ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಭರತ್‌ಪುರದ ಎಸ್‌ಪಿ ಮೃದುಲ್ ಕಚವಾ ತಿಳಿಸಿದ್ದಾರೆ.

“ನನ್ನ ಸಹೋದರ ಶಿಕ್ಷಕರಿಗೆ ಮೀಸಲಿಟ್ಟಿದ್ದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ಶಿಕ್ಷಕ ಗಂಗಾರಾಮ್ ಗುರ್ಜರ್ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ್ದಾರೆ. ಹಲ್ಲೆ ಮಾಡುವುದರ ಜೊತೆ ಜಾತಿ ನಿಂದನೆಯನ್ನು ಮಾಡಿದ್ದಾನೆ. ಹಲ್ಲೆಯಿಂದ ನನ್ನ ಸಹೋದರನಿಗೆ ಮೈಮೇಲೆ ತೀವ್ರ ಗಾಯಗಳಾಗಿದೆ” ಎಂದು ಸಂತ್ರಸ್ತ ವಿದ್ಯಾರ್ಥಿಯ ಸಹೋದರ ರಾನ್ ಸಿಂಗ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...