ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

Date:

ಕೇಂದ್ರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

14 ತಿಂಗಳಲ್ಲಿ 4 ಬಾರಿ ಮೋದಿ ಕಾರ್ಯಕ್ರಮಕ್ಕೆ ಗೈರಾದ ಕೆಸಿಆರ್‌

‌ಬಹುಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ತೆಲಂಗಾಣಕ್ಕೆ ಭೇಟಿ ನೀಡಿದ್ದಾರೆ. ಆದರೆ, ಮೋದಿ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ (ಕೆ.ಚಂದ್ರಶೇಖರ್ ರಾವ್‌) ವಿಮಾನ ನಿಲ್ದಾಣಕ್ಕೆ ಬಂದಿಲ್ಲ. ಪ್ರಧಾನಿಗಳ ಕಾರ್ಯಕ್ರಮದಲ್ಲೂ ಅವರು ಭಾಗವಹಿಸುತ್ತಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರದ 11, 360 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳು ಮತ್ತು ಕಾಮಗಾರಿಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ‌ ನೆರವೇರಿಸಲಿದ್ದು, ಜೊತೆಗೆ ಸಿಖಂದ್ರಾಬಾದ್‌-ತಿರುಪತಿ ನಡುವೆ ಸಂಚರಿಸಲಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೂ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11:30ರ ಸುಮಾರಿಗೆ ಬೇಗಂಪೇಟ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ತೆಲಂಗಾಣದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ಮತ್ತು ಬಿಜೆಪಿಯ ತೆಲಂಗಾಣ ಘಟಕದ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಮುಂತಾದವರು ಸ್ವಾಗತಿಸಿದ್ದಾರೆ. ಶಿಷ್ಟಾಚಾರದಂತೆ ಪ್ರಧಾನಿಗಳನ್ನು ಸ್ವಾಗತಿಸಲು ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯಪಾಲರು ಮುಖ್ಯಮಂತ್ರಿ ಕೆಸಿಆರ್‌ ಅವರಿಗೆ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಆದರೆ, ಹಿಂದಿನಂತೆ ಈ ಬಾರಿಯೂ ಮೋದಿಯವರ ಕಾರ್ಯಕ್ರಮಗಳಿಂದ ಕೆಸಿಆರ್‌ ಅಂತರ ಕಾಯ್ದುಕೊಂಡಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳಿಗೆ ಕೆಸಿಆರ್‌ ಗೈರಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ 14 ತಿಂಗಳುಗಳಲ್ಲಿ ಅವರು 4 ಬಾರಿ ಪ್ರಧಾನಿಗಳ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಕೆಸಿಆರ್‌, ತೆಲಂಗಾಣಕ್ಕೆ ಸೀಮಿತವಾಗಿದ್ದ ತಮ್ಮ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ವಿಸ್ತರಿಸಿದ ಬೆನ್ನಲ್ಲೇ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಯನ್ನು ವಿರೋಧಿಸುತ್ತಲೇ ಬಂದಿರುವ ಕೆಸಿಆರ್‌ ತಮ್ಮ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತಮ್ಮ ಮೇಲೆ ಅಸ್ತ್ರವನ್ನಾಗಿ ಪ್ರಯೋಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಮೋದಿ ಭೇಟಿಯಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ 64,500...

ಸಂಸತ್ ಭವನ ಉದ್ಘಾಟನೆ: ರೈತ ಧ್ವನಿಗೆ ಬೆಚ್ಚಿದ ಸರ್ಕಾರ; ದೆಹಲಿ ಗಡಿಯಲ್ಲಿ ಪೊಲೀಸ್ ಭದ್ರತೆ

ಹೊಸ ಸಂಸತ್‌ ಭವನದ ಉದ್ಘಾಟನೆ ಇಂದು (ಭಾನುವಾರ) ನಡೆಯುತ್ತಿದೆ. ಇದೇ ವೇಳೆ,...

ರಾಷ್ಟ್ರಪತಿಗಳು ಏಕೆ ಸಂಸತ್ ಭವನ ಉದ್ಘಾಟಿಸಬಾರದು: ನಟ ಕಮಲ್‌ ಹಾಸನ್‌ ಪ್ರಶ್ನೆ

"ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ...

ಗುಜರಾತ್‌ | 10ನೇ ತರಗತಿ ಫಲಿತಾಂಶ; 157 ಶಾಲೆಗಳಲ್ಲಿ ಶೂನ್ಯ ಫಲಿತಾಂಶ; ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಇತ್ತೀಚಿಗಷ್ಟೆ 2023ನೇ ಸಾಲಿನ ಗುಜರಾತ್‌ನ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟಾರೆ...