ಜಮ್ಮು ಮತ್ತು ಕಾಶ್ಮೀರ | ಉಗ್ರರ ಬಾಂಬ್ ದಾಳಿಗೆ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

Date:

Advertisements
  • ಸೇನಾ ಸಿಬ್ಬಂದಿ ಹುತಾತ್ಮರಾದ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತ
  • ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನೆ ಮೇಲೆ ಉಗ್ರರ ದಾಳಿ

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶುಕ್ರವಾರ (ಮೇ 5) ಬೆಳಿಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಜಮ್ಮು ಪ್ರದೇಶದ ಭಾಟಾ ಧುರಿಯನ್ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ ಆಗಮಿಸಲು ಹೊಂಚು ಹಾಕಿದ್ದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

Advertisements

ಕಾಂಡಿ ಅರಣ್ಯದ ದಟ್ಟವಾದ ಪೊದೆಗಳಲ್ಲಿ ಮತ್ತು ಕಲ್ಲಿನ ಭೂಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತಿತ್ತು. ಮೇ 3ರಂದು ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು.

ಬೆಳಿಗ್ಗೆ 7.30ರ ಸುಮಾರಿಗೆ ಶೋಧ ತಂಡ ಭಯೋತ್ಪಾದಕರ ಸಂಪರ್ಕ ಇರುವ ಸ್ಥಳ ಪತ್ತೆ ಮಾಡಿದ್ದಾರೆ. ಭಯೋತ್ಪಾದಕರು ಮತ್ತು ಸೇನೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಬಳಿಕ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಸ್ಫೋಟಕ ಸಾಧನಗಳಿಂದ ದಾಳಿ ಮಾಡಿದ್ದಾರೆ.

ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಅಧಿಕಾರಿ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಪರಿಸ್ಥಿತಿ ಕೈ ಮೀರಿದರೆ ‘ಕಂಡಲ್ಲಿ ಗುಂಡಿಕ್ಕಲುʼ ಆದೇಶ

ಪ್ರಜಮ್ಮು ಮತ್ತು ಕಾಶ್ಮೀರ ಭಾಗದ ಕಾರ್ಯಾಚರಣೆಯನ್ನು ಬಲಪಡಿಸಲು ಹೆಚ್ಚುವರಿ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಸಿಲುಕಿದೆ ಎಂದು ಸೇನೆ ಹೇಳಿದೆ.

ಗುಂಡಿನ ಚಕಮಕಿಯ ಕಾರಣದಿಂದ ಭಯೋತ್ಪಾದಕ ಗುಂಪಿನಲ್ಲೂ ಸಾವು ನೋವುಗಳು ಸಂಭವಿಸಿರುವ ಸಾಧ್ಯತೆಯಿದೆ. ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಆದರೂ ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಈ ಮಧ್ಯೆ, ರಜೌರಿ ಪ್ರದೇಶದಲ್ಲಿ ಮೊಬೈಲ್, ಅಂತರ್ಜಾಲ ಸೇವೆ ಸೌಲಭ್ಯಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X