ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ; ಆರೋಪಿಗಳಲ್ಲಿ ಬಿಜೆಪಿಯ ಮಾಜಿ ಶಾಸಕನ ಹೆಸರು

Date:

  • ಉನ್ನಾವೋ ಜಿಲ್ಲೆಯಲ್ಲಿ ಬಾಲಕಿ ಮೇಲೆ 2017ರಲ್ಲಿ ಸಾಮೂಹಿಕ ಅತ್ಯಾಚಾರ
  • ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಮೌರವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಆರೋಪಿಗಳು ಬೆಂಕಿ ಹಚ್ಚಿರುವ ಘಟನೆ ಸೋಮವಾರ (ಏಪ್ರಿಲ್ 17) ರಾತ್ರಿ ವರದಿಯಾಗಿದೆ.

- Advertisement -

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ 2017ರ ಜೂನ್‌ 4ರಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂತ್ರಸ್ತೆ 2018 ಏಪ್ರಿಲ್ 8ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆಯಲ್ಲಿ ಬೆಂಕಿಯಿಂದ ಸಂತ್ರಸ್ತೆಯ ಮನೆಯಲ್ಲಿನ ಎರಡು ಶಿಶುಗಳಿಗೆ ಸುಟ್ಟ ಗಾಯಗಳಾಗಿವೆ. ತನ್ನ ಮಗಳ ಮೇಲೆ ಅತ್ಯಾಚಾರಗೈದ ಪೀಡಕರು ಆಕೆಯ ಮಾವ ಹಾಗೂ ಮೈದುನನ ಜೊತೆ ಸೇರಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ, ಸಂತ್ರಸ್ತೆಯ ಮಾವ ಹಾಗೂ ಮೈದುನ ಸೇರಿ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿ ಪುರ್ವಾ ಸಂತೋಷ್ ಕುಮಾರ್ ಹೇಳಿದ್ದಾರೆ.

“ಘಟನೆ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

“ಬೆಂಕಿ ದುರಂತದಲ್ಲಿ ಸಂಬಂಧಿಯ ಮೂರು ತಿಂಗಳ ಹೆಣ್ಣು ಶಿಶು, ಉನ್ನಾವೋ ಸಂತ್ರಸ್ತೆಯ ನಾಲ್ಕು ತಿಂಗಳ ಶಿಶುವಿಗೆ ಗಾಯಗಳಾಗಿವೆ. ಚಿಕಿತ್ಸೆಗೆ ಶಿಶುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ | ‘ವಝು’ಗೆ ಅವಕಾಶ ಕಲ್ಪಿಸಲು ಸಭೆ ಮೂಲಕ ತೀರ್ಮಾನಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ಉನ್ನಾವೋ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರು. 2019ರಲ್ಲಿ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಆಕೆಯ ಕಾರ್‌ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...