ಉತ್ತರ ಪ್ರದೇಶ | ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರದಲ್ಲಿ ಮೆಣಸಿನಕಾಯಿ ಇಟ್ಟು ಚಿತ್ರಹಿಂಸೆ

Date:

Advertisements

ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ ಅವರ ಗುದದ್ವಾರದಲ್ಲಿ ಮೆಣಸಿನಕಾಯಿ ಇಟ್ಟು ಅಮಾನುಷವಾಗಿ ಚಿತ್ರ ಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಕೊಂಕಟಿ ಚೌರಾಹಾ ಪಟ್ಟಣದಲ್ಲಿ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ದೃಶ್ಯದಲ್ಲಿರುವಂತೆ ಕಳ್ಳತನದ ಆರೋಪದ ಮೇಲೆ 15 ಮತ್ತು 10 ವರ್ಷದ ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ ಗುದದ್ವಾರದಲ್ಲಿ ಮೆಣಸಿನಕಾಯಿ ಉಜ್ಜಿ ಚಿತ್ರಹಿಂಸೆ ನಿಡಲಾಗಿದೆ. ಜೊತೆಗೆ ಕೆಲವು ಅಪರಿಚಿತ ಚುಚ್ಚುಮದ್ದನ್ನು ಸಹ ಅವರಿಗೆ ನೀಡಲಾಗಿದೆ.     

ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಿಗಳು ಇಬ್ಬರು ಅಪ್ರಾಪ್ತರನ್ನು ನಿಂದಿಸುತ್ತಿರುವುದನ್ನು ನೋಡಬಹುದು.

Advertisements

ಈ ಸುದ್ದಿ ಓದಿದ್ದೀರಾ? ಜೈಪುರ | ಪತಿಯಿಂದ ಲಂಚ ಸ್ವೀಕಾರ: ಜೈಪುರ ಮೇಯರ್‌ ವಜಾ

ಸ್ಥಳೀಯ ಗೂಂಡಾಗಳೆಂದು ಗುರುತಿಸಲಾದ ಆರೋಪಿಗಳು ಅಪ್ರಾಪ್ತರ ಖಾಸಗಿ ಭಾಗಗಳಿಗೆ ಹಸಿರು ಮೆಣಸಿನಕಾಯಿ ಇಟ್ಟು ಉಚ್ಚಿದ ನಂತರ ಬಲವಂತವಾಗಿ ಮಕ್ಕಳಿಗೆ ಮೂತ್ರ ಕುಡಿಸಿದ್ದಾರೆ.

ವಿಡಿಯೋದಲ್ಲಿರುವಂತೆ ಮಕ್ಕಳಿಬ್ಬರಿಗೆ ಚುಚ್ಚುಮದ್ದು ನೀಡುತ್ತಿರುವಾಗ ಅವರು ಬೇಡ ಎಂದು ಕೈಗಳನ್ನು ಅಡ್ಡ ಇಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಪತ್ರಾ ಠಾಣಾ ಪ್ರದೇಶದ ಕೊಂಕಟಿ ಚೌಕ್ ಪ್ರದೇಶದಲ್ಲಿ ಆಗಸ್ಟ್‌ 4ರಂದು ಅರ್ಶನ್ ಎಂಬ ಕೋಳಿ ಮಾಂಸದಂಗಡಿಯಿಂದ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ವಿಡಿಯೋದಲ್ಲಿ, ಹುಡುಗರು ತಮ್ಮ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿಕೊಂಡು, ಪ್ಯಾಂಟನ್ನು ಕೆಳಕ್ಕೆ ಎಳೆದುಕೊಂಡು ನೆಲದ ಮೇಲೆ ಮಲಗಿರುವುದನ್ನು ತೋರಿಸಲಾಗಿದೆ. ಒಬ್ಬ ವ್ಯಕ್ತಿ ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿದ್ದಾನೆ. ನೋವಿನಿಂದ ಬಾಲಕರು ಚೀರಾಡುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೋದ ಬಗ್ಗೆ ತಿಳಿದ ನಂತರ, ಸಿದ್ಧಾರ್ಥ ನಗರದ ಪೊಲೀಸರು ದಾಖಲಿಸಿರುವ ದೂರಿನ ಆಧಾರದ ಮೇಲೆ ಹಲ್ಲೆ ನಡೆಸಿದ 6 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನಿನ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X