‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

Date:

Advertisements

ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ 45ನೇ ‘ಯುರೋಪಿಯನ್ ಎಸ್ಸೇ ಪ್ರೈಜ್’ ನೀಡಲಾಗುತ್ತದೆ ಎಂದು ಚಾಲ್ಸ್ ವೈಲನ್ ಫೌಂಡೇಷನ್ ಪ್ರಕಟಿಸಿದೆ.

‘ಆಜಾದಿ’(2021) ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಕಲನದ ಪ್ರೆಂಚ್‌ ಅನುವಾದಕ್ಕಾಗಿ ಅರುಂಧತಿ ರಾಯ್ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ಫೌಂಡೇಷನ್‌ ತಿಳಿಸಿದೆ.

“ಆಜಾದಿ” ಸಂಕಲನದಲ್ಲಿ ರಾಯ್‌ ಅವರು ‘ಬೆಳೆಯುತ್ತಿರುವ ನಿರಂಕುಶವಾದ’ದ ಜಗತ್ತಿನಲ್ಲಿ ಸ್ವಾತಂತ್ರ್ಯದ ಅರ್ಥವನ್ನು ಪ್ರತಿಬಿಂಬಿಸಿದ್ದಾರೆ. ಅಲ್ಲದೆ ಈ ಪ್ರಬಂಧಗಳು ಪ್ರಸ್ತುತ ಕಾಲದಲ್ಲಿ ಕಾಲ್ಪನಿಕ ಮತ್ತು ಪರ್ಯಾಯ ಕಲ್ಪನೆಗಳ ಪಾತ್ರದ ಕುರಿತ ಹಲವು ಚಿಂತನೆಗಳನ್ನು ಒಳಗೊಂಡಿವೆ. ಫ್ಯಾಸಿಸಂ ಮತ್ತು ಅದರ ರಚನೆಯ ವಿಶ್ಲೇಷಣೆ. ಇದು ಹೇಗೆ ನಮ್ಮ ಜೀವನವನ್ನು ಹೆಚ್ಚು ಆಕ್ರಮಿಸುತ್ತಿರುವ ಸಮಸ್ಯೆ ಎಂಬುದು ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಒಳಗೊಂಡಿದೆ” ಎಂದು ಫೌಂಡೇಷನ್‌ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

ದೇಶದ ಪ್ರಸಿದ್ಧ ಲೇಖಕಿಯಾಗಿರುವ ಅರುಂಧತಿ ರಾಯ್ ಅವರ “ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್”, “ದಿ ಮಿನಿಸ್ಟ್ರಿ ಆಫ್ ಅಟ್ಮೋಸ್ಟ್ ಹ್ಯಾಪಿನೆಸ್” ಮತ್ತು “ಮೈ ಸೆಡಿಟಿಯಸ್ ಹಾರ್ಟ್” ಸೇರಿದಂತೆ ಹಲವು ಕೃತಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿವೆ.

ಸ್ವಿಟ್ಜರ್ಲೆಂಡ್‌ನ ಲುಸಾನ್ ನಗರದಲ್ಲಿ ಸೆಪ್ಟೆಂಬರ್ 12ರಂದು ನಡೆಯುವ ಸಮಾರಂಭದಲ್ಲಿ ಅಂದಾಜು ₹ 18 ಲಕ್ಷ ಮೊತ್ತದೊಂದಿಗೆ ಪ್ರಶಸ್ತಿಯನ್ನು ರಾಯ್ ಅವರು ಸ್ವೀಕರಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X