ಕರ್ನಾಟಕದ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾದರೆ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

Date:

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ನಕ್ಸಲರು ಸಂಪೂರ್ಣವಾಗಿ ಶರಣಾಗತರಾದರೆ ಅವರ ಮೇಲಿನ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

- Advertisement -

ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ. ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ. ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ ಎಂದು ಸಿಎಂ ತಿಳಿಸಿದರು.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗು ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...