ಏಕನಾಥ್‌ ಶಿಂಧೆಗೆ ಇಂದಿನಿಂದ ಕಷ್ಟದ ದಿನಗಳು ಶುರು: ಸಂಜಯ್ ರಾವುತ್

Date:

Advertisements

ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಮಾಣ ವಚನ ಸ್ವೀಕರಿಸಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಕಷ್ಟದ ದಿನಗಳು ಶುರುವಾಗಿದ್ದು, ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಪ್ರಕ್ರಿಯೆಯ ಆರಂಭ ಎಂದು ಶಿವಸೇನಾ (ಯುಟಿಬಿ) ರಾಜ್ಯಸಭೆಯ ಸದಸ್ಯ ಸಂಜಯ್ ರಾವುತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಗಳನ್ನು ಒಡೆದು ಸರ್ಕಾರ ರಚಿಸುವ ಕುತಂತ್ರವನ್ನು ಮಹಾರಾಷ್ಟ್ರ ಜನರು ಧೀರ್ಘ ಕಾಲದವರೆಗೆ ಸಹಿಸುವುದಿಲ್ಲ. ರಾಜ್ಯದ ರಾಜಕೀಯವನ್ನು ಸಂಪೂರ್ಣವಾಗಿ ಹಾಳುಮಾಡಬೇಕೆಂದು ಕೆಲವರು ದೃಢವಾಗಿ ನಿರ್ಧರಿಸಿದ್ದಾರೆ. ಆದರೆ ಹಾಳು ಮಾಡುವವರೆ ತಾವೇ ಮುಳುಗುತ್ತಾರೆಂದು ತಿಳಿದಿಲ್ಲ” ಎಂದು ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದರು.

“ನಾನು ಶರದ್ ಪವಾರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು“ನಾನು ಬಲಶಾಲಿ. ನಮಗೆ ಜನರ ಬೆಂಬಲವಿದೆ. ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಮರುನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

Advertisements

‘ರಾಜ್ಯದ ರಾಜಕೀಯವನ್ನು ಸಂಪೂರ್ಣವಾಗಿ ಹಾಳುಮಾಡಬೇಕೆಂದು ಕೆಲವರು ದೃಢವಾಗಿ ನಿರ್ಧರಿಸಿದ್ದಾರೆ. ಅವರ ಆಯ್ಕೆಯ ಮಾರ್ಗದಲ್ಲಿಅವರು ಸಾಗಲಿ’ಎಂದು ಅಜಿತ್ ಪವಾರ್, ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಬಿಜೆಪಿಯನ್ನು ಗಮನದಲ್ಲಿರಿಸಿಕೊಂಡು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಂಡಾಯ ನನಗೆ ಹೊಸದಲ್ಲ, ಮತ್ತೆ ಪಕ್ಷ ಸಂಘಟಿಸುತ್ತೇನೆ; ಅಜಿತ್‌ ನಡೆಗೆ ಶರದ್‌ ಪವಾರ್ ಪ್ರತಿಕ್ರಿಯೆ

ಎನ್‌ಸಿಪಿ ಏಕನಾಥ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್‌ಸಿಪಿಯ ಒಂಭತ್ತು ಶಾಸಕರಿಗೆ ಪಕ್ಷದಿಂದ ಅಧಿಕೃತ ಬೆಂಬಲ ಇಲ್ಲ ಎಂದು ಎನ್‌ಸಿಪಿ ವಕ್ತಾರ ಮಹೇಶ್ ತಾಪಸೆ ಹೇಳಿದ್ದಾರೆ.

ರಾಜ್ಯದ ಜನತೆ ಪಕ್ಷದ ರಾಷ್ಟ್ರೀಯ ನಾಯಕ ಶರದ್ ಪವಾರ್ ಅವರ ಜೊತೆಗಿದ್ದಾರೆ. ಪ್ರಮಾಣ ವಚನ ಸಮಾರಂಭವು ‘ಆಪರೇಷನ್ ಕಮಲ’ದ ಭಾಗವಷ್ಟೇ. ಪ್ರಮಾಣ ವಚನ ಸ್ವೀಕರಿಸಿದ್ದು ಶಾಸಕರ ಸ್ವಂತ ನಿರ್ಧಾರವೇ ಹೊರತು ಎನ್‌ಸಿಪಿಯ ನಿರ್ಧಾರವಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X