ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

Date:

Advertisements

ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಲೋಕಾರ್ಪಣೆಯ ಕಾರ್ಯಕ್ರಮವು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆ, ಬೆಳವಣಿಗೆಗಳು ಒಂದೊಂದು ರಾಜ್ಯಗಳಲ್ಲಿ ಒಂದೊಂದು ವಿವಾದಗಳು ಉಂಟಾಗುತ್ತಿದೆ.

ಕರ್ನಾಟಕದಲ್ಲಿ ಸದ್ಯ ಬಿಜೆಪಿ ಹೇಳುತ್ತಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವು ವಿವಾದವಾಗಿದ್ದರೆ, ನೆರೆಯ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ನಾಯಕನೋರ್ವ ನೀಡಿರುವ ‘ರಾಮ ಮಾಂಸಾಹಾರಿ’ ಹೇಳಿಕೆಯು ವಿವಾದ ಸೃಷ್ಟಿಸಿದೆ.

ಎನ್​ಸಿಪಿ ಶರದ್ ಪವಾರ್ ಬಣದ ಶಾಸಕ ಮತ್ತು ಮಾಜಿ ಸಚಿವ ಜಿತೇಂದ್ರ ಆವ್ಹಾದ್​, ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆಯುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಜಿತೇಂದ್ರ ಅವರ ಈ ಹೇಳಿಕೆಗೆ ಸಂಬಂಧಿಸಿದಂತೆ ಅಜಿತ್ ಪವಾರ್ ಬಣದ ಎನ್‌ಸಿಪಿ ಕೂಡ ಮುಂಬೈನಲ್ಲಿ ಪ್ರತಿಭಟನೆ ನಡೆಸಿದೆ.

Advertisements

“ರಾಮ ನಮ್ಮವನು, ಬಹುಜನರಿಗೆ ಸೇರಿದವನು. ರಾಮ ಬೇಟೆಯಾಡಿ ಪ್ರಾಣಿಗಳನ್ನು ತಿನ್ನುತ್ತಿದ್ದ. ನಾವು ರಾಮನನ್ನು ಆದರ್ಶ ಎಂದು ಪರಿಗಣಿಸಿ ಕುರಿ ಮಾಂಸ ತಿನ್ನುತ್ತೇವೆ. ಇದು ರಾಮನ ಆದರ್ಶ. 14 ವರ್ಷಗಳ ಕಾಲ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರವನ್ನು ಹುಡುಕಲು ಎಲ್ಲಿಗೆ ಹೋಗುತ್ತಾನೆ” ಎಂದು ಅವರು ಹೇಳಿದರು.

“ರಾಮ ಕ್ಷತ್ರಿಯ, ಕ್ಷತ್ರಿಯರು ಎಂದೂ ಮಾಂಸಾಹಾರಿಗಳು, ರಾಮ ಕೂಡ ಮಾಂಸಾಹಾರಿಯಾಗಿದ್ದ. ಬಿಜೆಪಿ ಮತ್ತು ಆರ್‍‌ಎಸ್‌ಎಸ್‌ನವರು ಭಾರತವನ್ನು ಸಸ್ಯಾಹಾರಿ ದೇಶವನ್ನಾಗಿಸಲು ಹೊರಟಿದ್ದಾರಾ? ಈ ದೇಶದ 80 ಶೇ. ಜನರು ಮಾಂಸಾಹಾರಿಗಳು. ಅವರಲ್ಲಿ ರಾಮಭಕ್ತರೂ ಕೂಡ ಇಲ್ಲವೇ. ಇದರಲ್ಲಿ ವಿವಾದ ಏನಿದೆ?” ಎಂದು ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತೆರಳುತ್ತಿದ್ದ ವೇಳೆ ಜಿತೇಂದ್ರ ಆವ್ಹಾದ್ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಲವು ಬಿಜೆಪಿ ಮುಖಂಡು, “ಜಿತೇಂದ್ರ ಆವ್ಹಾದ್​ ನೀಡಿರುವ ಹೇಳಿಕೆಯು ಹಾಸ್ಯಾಸ್ಪದ. ಶ್ರೀರಾಮ ಕಾಡಿನಲ್ಲಿ ಏನು ತಿನ್ನುತ್ತಿದ್ದರು ಎಂಬುದನ್ನು ನೋಡಲು ಹೋಗಿದ್ದರೇ? ಜ.22ರಂದು ರಾಮ ಮಂದಿರದ ಅದ್ಧೂರಿ ಉದ್ಘಾಟನೆ ನಡೆಯುತ್ತಿರುವುದರಿಂದ ಇಂಡಿಯಾ ಮೈತ್ರಿಕೂಟದ ಜನರಿಗೆ ಹೊಟ್ಟೆ ನೋವು ಅಷ್ಟೆ, ಇಷ್ಟು ದೊಡ್ಡ ಹೇಳಿಕೆ ನೀಡಿದ ನಂತರವೂ ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಏಕೆ ಮೌನವಾಗಿದ್ದಾರೆ? ಸನಾತನ ಧರ್ಮವನ್ನು ಅವಹೇಳನ ಮಾಡಿದ್ದಾರೆ” ಎಂದು ಕಿಡಿಕಾರುತ್ತಿದ್ದಾರೆ.

ಕ್ಷಮೆಯಾಚನೆ

“ಸಂಶೋಧನೆ ಇಲ್ಲದೆ ಮಾತನಾಡಿಲ್ಲ. ಈ ಬಗ್ಗೆ ಮೂಲ ರಾಮಾಯಣದಲ್ಲೇ ಉಲ್ಲೇಖವಿದೆ. ಆದರೆ ನನ್ನ ಹೇಳಿಕೆಯಿಂದ ಭಾವನೆಗೆ ಧಕ್ಕೆಯಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿಕೆಯು ವಿವಾದ ಉಂಟು ಮಾಡಿದ ನಂತರ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ತಿಳಿಸುವ ಮೂಲಕ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ರಾಮಾಯಣದ ಕೆಲವೊಂದು ಅಧ್ಯಾಯಗಳನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X