ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

Date:

Advertisements

ಮಹಾರಾಷ್ಟ್ರ ರಾಜಕೀಯಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳು ಎರಡನೇ ದಿನವೂ ಮುಂದುವರೆದಿದ್ದು, ಎನ್‌ಸಿಪಿಯಿಂದ ಬಂಡೆದ್ದ ನಾಯಕರಲ್ಲಿ ಸಂಸದರಾದ ಪ್ರಫುಲ್‌ ಪಟೇಲ್ ಹಾಗೂ ಸುನೀಲ್ ತಟ್ಕರೆ ಅವರನ್ನು ಅನರ್ಹಗೊಳಿಸಲಾಗಿದೆ.

ಹಾಗೆಯೇ ಇವರಿಬ್ಬರು ಸಂಸದರನ್ನು ಒಳಗೊಂಡು 9 ಶಾಸಕರನ್ನು ಅನರ್ಹಗೊಳಿಸುವಂತೆ ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ.

ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಉಚ್ಚಾಟಿಸಲಾಗಿದ್ದು, ಮೂವರೂ ಅಜಿತ್ ಪವಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ಎನ್‌ಸಿಪಿಯ ಇಬ್ಬರು ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರು ನಮ್ಮ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 9 ಶಾಸಕರ ಪ್ರಮಾಣ ವಚನ ಸಮಾರಂಭವನ್ನು ಸುಗಮಗೊಳಿಸುವ ಮತ್ತು ಮುನ್ನಡೆಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಲು ನಾನು ನಿಮಗೆ ಅತ್ಯಂತ ತುರ್ತಾಗಿ ಪತ್ರ ಬರೆಯುತ್ತಿದ್ದೇನೆ ಎಂದು ಎನ್‌ಸಿಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಸುಪ್ರಿಯಾ ಸುಳೆ ಅವರು ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ.

ಎನ್‌ಸಿಪಿಯ ಶಿಸ್ತು ಸಮಿತಿಯು ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಳ್ಳಲು ಅಜಿತ್ ಪವಾರ್ ಅವರನ್ನು ಬೆಂಬಲಿಸಿದ 9 ಶಾಸಕರನ್ನು ಅನರ್ಹಗೊಳಿಸುವಂತೆ ಕರೆ ನೀಡಿದೆ. ಎನ್‌ಸಿಪಿಯ 9 ಶಾಸಕರನ್ನು ತಕ್ಷಣ ಅನರ್ಹಗೊಳಿಸಬೇಕು. ಅವರನ್ನು ಸದಸ್ಯರಾಗಿ ಮುಂದುವರಿಯಲು ಅವಕಾಶ ನೀಡಿದರೆ, ಅವರು ಪಕ್ಷದ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದನ್ನು ಮುಂದುವರೆಸುವ ಸಾಧ್ಯತೆಯಿದೆ ಎಂದು ಎನ್‌ಸಿಪಿಯ ಶಿಸ್ತು ಸಮಿತಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಳ್ಳತನ ಮಾಡಿ ಸರಕಾರ ಮಾಡಿ ಭ್ರಷ್ಟಾಚಾರ ಮಾಡುವುದೇ ಬಿಜೆಪಿ ಉದ್ಯೋಗ, ಕರ್ನಾಟಕದ ಸ್ಥಿತಿಯೇ ನಿಮಗೂ ಬರಲಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X