ಎಸ್.ನಿಜಲಿಂಗಪ್ಪ ಪುಣ್ಯತಿಥಿ | ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಯಾಗಿದೆ: ಸಿದ್ದರಾಮಯ್ಯ

Date:

Advertisements

ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆ.8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ” ಎಂದರು.

Advertisements

ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ” ಎಂದು ತಿಳಿಸಿದರು

ಮುಖ್ಯಮಂತ್ರಿಯವರ ಹಾಗೂ ಬಿ ಕೆ ಹರಿಪ್ರಸಾದ್ ಅವರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, “ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X