ಮಂಜೂರಾತಿ ನೀಡಿರುವ ಟೆಂಡರ್‌ಗಳ ಕುರಿತು ತಿಂಗಳಲ್ಲಿ ಪರಿಶೀಲನೆ : ಸಚಿವ ಹೆಚ್‌.ಕೆ. ಪಾಟೀಲ್

Date:

Advertisements

ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಮುಗಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್ 13) ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ನಡೆಯಿತು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಪ್ರಮುಖ ನಿರ್ಣಯಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ. ಪಾಟೀಲ್, “ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್‌ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್ ಗಳನ್ನು ಆಹ್ವಾನಿಸಲಾಗಿದೆ. 19 ಪ್ರಸ್ತಾವನೆಗಳು ಪರಿಶೀಲನೆಯಲ್ಲಿದ್ದು, 18 ಪ್ರಸ್ತಾವನೆಗಳಿಗೆ ಕಾರ್ಯಾದೇಶ ನೀಡಲಾಗಿದೆ. 7 ಕಾಮಗಾರಿಗಳು ಮುಕ್ತಾಯವಾಗಿವೆ. 53 ಪ್ರಸ್ತಾವನೆಗಳು ಟೆಂಡರ್ ಕರೆಯಲು ಬಾಕಿ ಇವೆ. ಸಚಿವ ಸಂಪುಟ ಇವುಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಆಡಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲಾ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ” ಎಂದು ತಿಳಿಸಿದರು.

Advertisements

“ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 25 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ” ಎಂದು ಸಚಿವರು ಮಾಹಿತಿ ನೀಡಿದರು.

HK PATIL 1

“ಕಾರ್ಮಿಕ ಇಲಾಖೆಯಲ್ಲಿ ಇಎಸ್‍ಐನಲ್ಲಿ ಗುತ್ತಿಗೆ ವೈದ್ಯರ ವಿಲೀನ ಮಾಡುವ ಬಗ್ಗೆ ಚರ್ಚೆಯಾಗಿ ಮುಂದೂಡಲಾಗಿದೆ. ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ” ಎಂದು ತಿಳಿಸಿದ ಸಚಿವ ಪಾಟೀಲ್, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ” ಎಂದು ತಿಳಿಸಿದರು.

“ಸಾರಿಗೆ ಇಲಾಖೆಯಲ್ಲಿ ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 112 ಪೂರ್ಣ ಕವಚ ನಿರ್ಮಿತ ಬಿಎಸ್, 4 ವೇಗದೂತ ಬಸ್ಸುಗಳನ್ನು 46.48 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಬಂದಿದ್ದ ಪ್ರಸ್ತಾವನೆಯನ್ನು ಸಚಿವ ಸಂಪುಟ ಒಪ್ಪಿದೆ. 62 ಹೊಸ ಬಸ್ಸುಗಳನ್ನು ಖರೀದಿಸಲು ಹಾಗೂ 50 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ವರ್ಗಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ” ಎಂದು ಮಾಹಿತಿ ನೀಡಿದರು.

“ಗಣಿಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಭಾರತ್ ಚಿನ್ನದ ಗಣಿ ಸಂಸ್ಥೆ, ಕೆ.ಜಿಎಫ್ ಅವರು ಪಡೆದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರುವ ಟೇಲಿಂಗ್ ಡಂಪ್ಸ್‌ಗಳಿಗೆ ಎಂ.ಎಂ.ಡಿ.ಆರ್ ಕಾಯ್ದೆಯ ಕಲಂ 17ರನ್ವಯ ಕೇಂದ್ರ ಸರ್ಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಇದ್ದು, ಹೆಚ್ಚಿನ ತಾಂತ್ರಿಕ ವಿವರಗಳು ಅಗತ್ಯವಿರುವುದರಿಂದ ಇದನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ” ಎಂದು ಸಚಿವ ಹೆಚ್‌.ಕೆ. ಪಾಟೀಲ್ ತಿಳಿಸಿದರು.

“ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಯ ಆಕರ್ಷಣೆಗಾಗಿ Knowledge Partner ಆಯ್ಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇ-ಟೆಂಡರ್ ಕರೆಯಲಾಗಿದೆ. ಟೆಂಡರ್ ಪ್ರಕಾರ ಈಗಾಗಲೇ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಇಂಡಿಯಾ ಪ್ರೈ ಲಿ., ಇವರನ್ನು ಜಿಎಸ್‍ಟಿ ಒಳಗೊಂಡಂತೆ 21 ಕೋಟಿ ರೂ. ವೆಚ್ಚದಲ್ಲಿ Knowledge Partner ಆಗಿ ನೇಮಕ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ” ಎಂದು ತಿಳಿಸಿದರು.

“ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಡಿ ರಾಜ್ಯದಲ್ಲಿ ಕಾನೂನು ಮತ್ತು ನೀತಿಗೆ ಅನುಮೋದನೆ ನೀಡುವ ಬಗ್ಗೆ ಎರಡು ಮೂರು ವಿಚಾರಗಳಲ್ಲಿ ಬದಲಾವಣೆ ಅಗತ್ಯವನ್ನು ಮನಗಂಡು ಮುಂದೂಡಲಾಗಿದೆ. ಏಳನೇ ವೇತನ ಆಯೋಗದ ಬಗ್ಗೆ ಅಧಿಕೃತ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಯಾವುದೇ ನಿರ್ಣಯಗಳಾಗಿಲ್ಲ” ಎಂದು ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಪೋಕ್ಸೊ ಪ್ರಕರಣ | ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ ಪ್ರಕಟ; ಯಾವುದೇ ಕ್ಷಣದಲ್ಲಿ ಬಿಎಸ್‌ವೈ ಬಂಧನ

“ರಾಜ್ಯದ ಆಡಳಿತವನ್ನು ಹೆಚ್ಚು ಬಿಗಿಯಾಗಿ, ಪರಿಣಾಮಕಾರಿಯಾಗಿ, ಜನಸ್ನೇಹಿಯಾಗಿ ಮಾಡಬೇಕು, ವಿಳಂಬ ಆಗದ ಹಾಗೇ ಕೆಲಸಗಳಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ಹಾಗೂ ಮಾರ್ಗದರ್ಶನ ನೀಡಿದ್ದಾರೆ” ಎಂದು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ. ಪಾಟೀಲ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X