ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

Date:

Advertisements

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ನ.14) ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದಬಾದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು” ಎಂದರು.

Advertisements

“ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು” ಎಂದು ತಿಳಿಸಿದರು.

“ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು. ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ . ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ” ಎಂದರು.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ

“ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದ್ದೇವೆ” ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯೇಂದ್ರಗೆ ಉತ್ತರ ನೀಡುವುದಿಲ್ಲ

ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X