ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

Date:

Advertisements

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ ಕಾನೂನು ಜಾರಿಗೆ ಬರಲಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಹೇಳಿದರು.

ಗದಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಡವರ, ಸಣ್ಣ ರೈತರ ಪ್ರಕರಣಗಳು ಕೋರ್ಟ್‌ಗಳಲ್ಲಿ ವಿಳಂಬವಾಗದ ರೀತಿಯಲ್ಲಿ ಆದ್ಯತೆ ಮೇರೆಗೆ ಪ್ರಕರಣ ನಡೆಸಬೇಕು. ಆ ಮೂಲಕ 6 ತಿಂಗಳೊಳಗಾಗಿ ಪ್ರಕರಣಗಳು ಪರಿಹರಿಸಬೇಕು ಎಂಬ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ಮಸೂದೆಗೆ ರಾಜ್ಯಪಾಲರು ಅಂಕಿತವನ್ನೂ ಹಾಕಿದ್ದಾರೆ” ಎಂದು ಹೇಳಿದ್ದಾರೆ.

“ಫೆಬ್ರವರಿ 18ರಂದು ರಾಷ್ಟ್ರಪತಿಗಳು ಮಸೂದೆಗೆ ಅಂಕಿತ ಹಾಕಿದ್ದು, ಸರ್ಕಾರ ರಾಜ್ಯಪತ್ರದಲ್ಲಿ ಫೆಬ್ರವರಿ 29ರಂದು ಮಸೂದೆ ಜಾರಿಗೆ ಬರುವಂತೆ ಗೆಜೆಟ್ ನೊಟಿಫಿಕೇಶನ್ ಜಾರಿ ಮಾಡಿದೆ. ಮಾರ್ಚ್‌ 4ರಿಂದ ಹೊಸ ಕಾನೂನು ಜಾರಿಗೆ ಬರಲಿದೆ. ಈ ಕಾನೂನು ಬಡವರಿಗೆ ನ್ಯಾಯಾಲಯದಲ್ಲಿ ವಿಶೇಷ ಆದ್ಯತೆ ಮಾಡುವ ದೇಶದ ಮೊದಲ ಕಾನೂನು ಆಗಿದೆ” ಎಂದಿದ್ದಾರೆ.

Advertisements

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.‌ಎಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ್, ವಾರ್ತಾಧಿಕಾರಿ ವಸಂತ ಮಡ್ಲೂರ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X