ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆ ಬಳಸಿದ್ದ ನಿರ್ಮಲಾ ಸೀತಾರಾಮನ್; ಟ್ವೀಟ್ ವೈರಲ್

Date:

Advertisements

ಇತ್ತೀಚೆಗೆ ತಮಿಳುನಾಡು ಸರ್ಕಾರವು 2025-26ರ ಬಜೆಟ್ ಅನ್ನು ಮಂಡಿಸಿದೆ. ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ ‘ரூ'(ರೂ)ವಿನೊಂದಿಗೆ ಬದಲಾಯಿಸಿದೆ. ಈ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಗರು ಡಿಎಂಕೆ ಸರ್ಕಾರವನ್ನು ಟೀಕಿಸಿದ್ದಾರೆ. ಈ ನಡುವೆ ನಿರ್ಮಲಾ ಸೀತಾರಾಮನ್ ತನ್ನ ಹಳೆಯ ಪೋಸ್ಟ್‌ಗಳಲ್ಲಿ ತಮಿಳಿನ ‘ரூ’ ಚಿಹ್ನೆಯನ್ನು ಬಳಸಿದ್ದ ಸ್ಕ್ರೀನ್‌ಶಾಟ್‌ಗಳು ವೈರಲ್ ಆಗಿದೆ.

ಈ ಬಗ್ಗೆ ಇತ್ತೀಚೆಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕೇಂದ್ರ ವಿತ್ತ ಸಚಿವೆ, “ಡಿಎಂಕೆ ಸರ್ಕಾರ ತಮಿಳುನಾಡು ಬಜೆಟ್ 2025-26ರಲ್ಲಿ ರೂಪಾಯಿ ಚಿಹ್ನೆಯಾದ ₹ ಅನ್ನು ಬದಲಾಯಿಸಿದೆ ಎಂದು ತಿಳಿದುಬಂದಿದೆ. ಡಿಎಂಕೆಗೆ ₹ ಚಿಹ್ನೆಯಿಂದ ಸಮಸ್ಯೆಯಿದ್ದರೆ, 2010ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಈ ಚಿಹ್ನೆಯನ್ನು ಅಧಿಕೃತವಾಗಿ ಬಳಸಿದಾಗ ಯಾಕೆ ವಿರೋಧಿಸಿಲ್ಲ? ಆ ಸಂದರ್ಭದಲ್ಲಿ ಡಿಎಂಕೆ ಯುಪಿಎ ಸರ್ಕಾರದ ಭಾಗವಾಗಿತ್ತಲ್ಲವೇ” ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಡಿಎಂಕೆ ಪ್ರಾದೇಶಿಕತೆಯ ಸೋಗಿನಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂಬ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ, ಎಂ ಕೆ ಸ್ಟಾಲಿನ್‌ನಿಂದ ದಿಟ್ಟ ಕ್ರಮ: ಕರವೇ ನಾರಾಯಣಗೌಡ

Advertisements

ನಿರ್ಮಲಾ ಸೀತಾರಾಮನ್ ಅವರ ಈ ಎಕ್ಸ್‌ ಪೋಸ್ಟ್‌ಗೆ ಪತ್ರಕರ್ತ, ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮುಹಮ್ಮದ್ ಝುಬೈರ್, ಪ್ರತಿಕ್ರಿಯೆ ನೀಡಿದ್ದಾರೆ. 2017ರಲ್ಲಿ ನಿರ್ಮಲಾ ಸೀತಾರಾಮನ್ ಅವರು ತಮಿಳು ‘ரூ'(ರೂ)ಚಿಹ್ನೆಯನ್ನು ಹಲವು ಬಾರಿ ಎಕ್ಸ್‌ ಪೋಸ್ಟ್‌ನಲ್ಲಿ ಬಳಸಿದ್ದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಸ್ಕ್ರೀನ್‌ಶಾಟ್‌ಗಳು ಎಕ್ಸ್‌ನಲ್ಲಿ, ಇತರೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ನೆಟ್ಟಿಗರು ಹೇಳುವುದೇನು?

“ಡಿಎಂಕೆ ಸರ್ಕಾರ ಯಾವ ಚಿಹ್ನೆಯನ್ನು ಬಳಸಿದ್ದಕ್ಕೆ ನಿರ್ಮಲಾ ಸೀತಾರಾಮನ್ ಅವರು ಡಿಎಂಕೆ ಸರ್ಕಾರವನ್ನು ಟೀಕಿಸುತ್ತಿದ್ದರೋ, ಅದೇ ಚಿಹ್ನೆಯನ್ನು ಈ ಹಿಂದೆ ಅವರು ಬಳಸಿ ಈಗ ಸಿಕ್ಕಿಬಿದ್ದಿದ್ದಾರೆ. ಈ ಟ್ವೀಟ್‌ಗಳನ್ನು ಖಂಡಿತವಾಗಿಯೂ ಶೀಘ್ರವಾಗಿ ಡಿಲೀಟ್ ಮಾಡಬಹುದು. ಈಗಲೇ ಶೇರ್ ಮಾಡಿ, ಸೇವ್ ಮಾಡಿ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

“ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಅವರು ಈ ಹಿಂದೆ ತಮಿಳಿನಲ್ಲಿ ಟ್ವೀಟ್ ಮಾಡುವಾಗ ரூ ಚಿಹ್ನೆಯನ್ನು ಬಳಸಿದ್ದಾರೆ. ಈಗ ಡಿಎಂಕೆ ಈ ಚಿಹ್ನೆ ಬಳಸಿದಾಗ ಬಿಜೆಪಿ ಅಳುತ್ತಿದೆ. ಅಜೆಂಡಾವನ್ನು ನಾಶ ಮಾಡಲು ಈ ಟ್ವೀಟ್‌ಗಳನ್ನು ಹಂಚಿಕೊಳ್ಳಿ” ಎಂದು ಇನ್ನೋರ್ವ ನೆಟ್ಟಿಗರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X