ಡಿಕೆ ಶಿವಕುಮಾರ್-ಅಶ್ವತ್ಥನಾರಾಯಣ ಇಬ್ಬರಿಗೂ ಬುದ್ಧಿಮಾತು ಹೇಳಿದ ನಿರ್ಮಲಾನಂದ ಸ್ವಾಮೀಜಿ

Date:

Advertisements
  • ‘ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ’
  • ತಾಳ್ಮೆಯಿಂದ ಇಬ್ಬರೂ ವರ್ತಿಸಲು ಸ್ವಾಮೀಜಿ ಸಲಹೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥನಾರಾಯಣ ನಡುವಿನ ಒಳಜಗಳಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು ಇಬ್ಬರು ನಾಯಕರಿಗೂ ಕಿವಿಮಾತು ಹೇಳಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕೆಂಪೇಗೌಡರ ಜಯಂತಿಯಲ್ಲಿ ಇಬ್ಬರೂ ನಾಯಕರಿಗೆ ಅವರ ಸಮ್ಮುಖದಲ್ಲೇ ಬುದ್ಧಿ ಹೇಳಿದ ಸ್ವಾಮೀಜಿ, “ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ. ಆದರೂ, ಪರಸ್ಪರ ಕಿತ್ತಾಡಿಕೊಳ್ಳುವುದು, ಪರಸ್ಪರ ಕೆಸರೆರಚಾಡುವುದು ಮಾಡಬೇಡಿ. ತಾಳ್ಮೆಯಿಂದ ಇರಬೇಕು” ಎಂದು ಸಲಹೆ ನೀಡಿದ್ದಾರೆ.

“ಇಬ್ಬರೂ ನಾಯಕರು ಪರಸ್ಪರ ಬೈದಾಡಿಕೊಳ್ಳುವುದು ಸರಿಯಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳ ಆಚೆಗೆ ಸಮಚಿತ್ತದಿಂದ, ತಾಳ್ಮೆಯಿಂದ ಇಬ್ಬರೂ ವರ್ತಿಸಬೇಕು” ಎಂದರು. ವೇದಿಕೆಯಲ್ಲಿ ಆಸೀನರಾಗಿದ್ದ ನಿರ್ಮಲಾನಂದ ಶ್ರೀಗಳ ಆಜುಬಾಜುವಿನಲ್ಲಿ ಇಬ್ಬರೂ ನಾಯಕರು ಕುಳಿತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಧ್ಯಕ್ಷ ಕಟೀಲ್‌ಗೆ ಹಿಂದುತ್ವವೇ ತಲೆನೋವು

ಸುದ್ದಿಯಲ್ಲಿರುವ ನಾಯಕರು

ಡಿಕೆ ಶಿವಕುಮಾರ್ ಮತ್ತು ಅಶ್ವತ್ಥನಾರಾಯಣ್ ನಡುವಿನ ವಾಕ್ಸಮರ ಇತ್ತೀಚೆಗೆ ಮತ್ತಷ್ಟು ತಾರಕಕ್ಕೇರಿದೆ. ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಡಿಕೆಶಿ ಅವರಿಗೆ ಅಶ್ವತ್ ನಾರಾಯಣ ಅವರು, “ಬೆಂಗಳೂರಿಗೂ ನಿಮಗೂ ಏನಪ್ಪಾ ಸಂಬಂಧ?” ಎಂದು ಪ್ರಶ್ನಿಸಿದ್ದರು.

ಈ ಹಿಂದೆ ಅಶ್ವತ್ಥನಾರಾಯಣ ಅವರು ರಾಮನಗರದ ಉಸ್ತುವಾರಿ ಸಚಿವರಾಗಿದ್ದಾಗ ಡಿಕೆ ಶಿವಕುಮಾರ್ ಅವರು “ರಾಮನಗರಕ್ಕೂ ನಿನಗೂ ಏನಪ್ಪಾ ಸಂಬಂಧ” ಎಂದು ಪ್ರಶ್ನಿಸಿದ್ದರು.

ಈ ವಿಚಾರವಾಗಿ ಕಳೆದೊಂದು ವಾರದಿಂದ ಮಾಧ್ಯಮಗಳಲ್ಲಿ ಈ ಇಬ್ಬರು ನಾಯಕರ ಪರಸ್ಪರ ವಾಕ್ಸಮರ ಬಗ್ಗೆ ಸುದ್ದಿ ಪ್ರಕಟವಾಗುತ್ತಲೇ ಇತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X