ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಮುಂದುವರಿಸಿದ ನಿತೀಶ್, ಚಂದ್ರಬಾಬು ನಾಯ್ದು: ಶೀಘ್ರವೇ ರಾಷ್ಟ್ರಪತಿ ಭೇಟಿ

Date:

Advertisements

ಲೋಕಸಭೆ ಚುನಾವಣೆ ಫಲಿತಾಂಶ  ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ ನೇತೃತ್ವದ ಮೈತ್ರಿಕೂಟವು 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆದರೆ, ಇಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಇಬ್ಬರೂ ಕೂಡ ಭಾಗವಹಿಸಿದ್ದರು. ಅಲ್ಲದೇ, ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿರುವ ಬೆಂಬಲವನ್ನೇ ಮುಂದುವರಿಸುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೇ, ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರು ಬೆಂಬಲ ಪತ್ರವನ್ನು ನೀಡಿರುವ ಬಗ್ಗೆ ಕೂಡ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಮಿತ್ರಕೂಟದ ಸದಸ್ಯರು ಭೇಟಿಯಾಗಿ. ಸರ್ಕಾರ ರಚಿಸಲು ಅವಕಾಶ ಕೇಳಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Advertisements

ನಿತೀಶ್ ಕುಮಾರ್ ಅವರ ಜೆಡಿಯು 12 ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಪಡೆದಿವೆ. ಒಟ್ಟು 28 ಸ್ಥಾನಗಳಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಹುಮುಖ್ಯವಾಗಿ ಪರಿಣಮಿಸಿದೆ.

NDA MEETING

ಇಬ್ಬರನ್ನೂ ಪಕ್ಕದಲ್ಲೇ ಕೂರಿಸಿಕೊಂಡಿದ್ದ ನರೇಂದ್ರ ಮೋದಿ

ಇಂದು ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರನ್ನು ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು. ಈ ಬೆಳವಣಿಗೆಯು ಇವರಿಬ್ಬರೂ ಕೂಡ ಎನ್‌ಡಿಎ ಮೈತ್ರಿಕೂಟಕ್ಕೆ ಎಷ್ಟು ಅಗತ್ಯ ಎಂಬುದನ್ನು ತೋರಿಸಿಕೊಟ್ಟಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X