‘ಇಂಡಿಯಾ’ ಒಕ್ಕೂಟದಿಂದ ನಿತೀಶ್ ಕುಮಾರ್‌ಗೆ ಪ್ರಧಾನಿ ಸ್ಥಾನದ ಆಫರ್ ಬಂದಿತ್ತು: ಜೆಡಿಯು ಮುಖಂಡ ಆರೋಪ

Date:

Advertisements

“2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಇಂಡಿಯಾ ಮೈತ್ರಿಕೂಟದ ಹಲವು ಮಂದಿ ಮುಖಂಡರು ನಿತೀಶ್ ಕುಮಾರ್ ಅವರನ್ನು ಸಂಪರ್ಕ ಮಾಡಿ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಆದರೆ ನಾವು ತಿರಸ್ಕರಿಸಿದೆವು” ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಲೋಕಸಭಾ ಚುನಾವಣೆಯ ಫಲಿತಾಂಶದ ಸಮಯದಲ್ಲಿ ಎನ್‌ಡಿಎ ತೊರೆದು ಇಂಡಿಯಾ ಒಕ್ಕೂಟ ಸೇರಿದರೆ ನಿತೀಶ್ ಕುಮಾರ್ ಅವರನ್ನೇ ಪ್ರಧಾನಿ ಮಾಡುವುದಾಗಿ ಆಫರ್ ನೀಡಿದ್ದರು. ಇದನ್ನು ದೃಢೀಕರಿಸುವ ಫೋನ್ ದಾಖಲೆಗಳು ನಮ್ಮ ಬಳಿ ಇವೆ” ಎಂದು ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಇಂಡಿಯಾ ಮೈತ್ರಿಕೂಟವನ್ನು ನಿತೀಶ್ ಕುಮಾರ್ ಅವರು ತೊರೆಯಲು ಕಾರಣ ಏನು ಎಂಬ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ, “ಇಂಡಿಯಾ ಮೈತ್ರಿಕೂಟದ ಮೊದಲ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರು ನಿತೀಶ್ ಕುಮಾರ್ ಅವರನ್ನೇ ಸಂಚಾಲಕರನ್ನಾಗಿ ಮಾಡುವ ಆಸಕ್ತಿ ಹೊಂದಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಮಮತಾ ಬ್ಯಾನರ್ಜಿ ಅವರು ಪಿತೂರಿ ಮಾಡಿದ್ದರಿಂದ ಅವರಿಗೆ ಆ ಸ್ಥಾನ ಲಭಿಸಿಲ್ಲ. ಆ ಬಳಿಕ ಪ್ರಧಾನಿ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಕೂಡ ಶಿಫಾರಸು ಮಾಡಿದರು” ಎಂದು ತಿಳಿಸಿದ್ದಾರೆ.

Advertisements

“ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಪ್ರಶ್ನೆಗಳನ್ನು ಎತ್ತಿದರು. ಎಲ್ಲರನ್ನೂ ಒಟ್ಟುಗೂಡಿಸಲು ಆಗ ಶ್ರಮಿಸಿದ್ದು ನಿತೀಶ್ ಕುಮಾರ್. ಆದರೆ, ಅವರನ್ನು ಸಂಚಾಲಕರನ್ನಾಗಿ ಮಾಡುವುದರಿಂದ ತಪ್ಪಿಸಿದರು. ಇಂತಹ ಅವಮಾನವನ್ನು ಎದುರಿಸುವುದು ನಮಗೆ ಸ್ವೀಕರಿಸಲು ಆಗಿಲ್ಲ. ನಾವು ಅವರ ಒಳಗಿನ ಉದ್ದೇಶವನ್ನು ಅರ್ಥಮಾಡಿಕೊಂಡೆವು. ಹಾಗಾಗಿಯೇ, ಜೆಡಿಯು ಇಂಡಿಯಾ ಮೈತ್ರಿಕೂಟದೊಂದಿಗಿನ ಸಂಬಂಧವನ್ನು ಮುರಿದುಕೊಂಡು ಎನ್‌ಡಿಎ ಸೇರಿದೆ” ಎಂದು ಹೇಳಿಕೆ ನೀಡಿದ್ದಾರೆ.

“ಚುನಾವಣೆಗೂ ಮೊದಲು ನಿತೀಶ್ ಕುಮಾರ್ ಅವರು ಸಂಚಾಲಕರಾಗುವುದನ್ನು ಇಷ್ಟಪಡದ ಇಂಡಿಯಾ ಮೈತ್ರಿಕೂಟದ ನಾಯಕರು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಪ್ರಧಾನಿ ಹುದ್ದೆಯನ್ನು ಆಫರ್ ನೀಡಿದರು. ನಾವು ಅದನ್ನು ತಿರಸ್ಕರಿಸಿ ಎನ್‌ಡಿಎ ಜೊತೆಗೆ ಮೈತ್ರಿ ಮುಂದುವರಿಸಿದ್ದೇವೆ. ನರೇಂದ್ರ ಮೋದಿಯವರನ್ನು ಎನ್‌ಡಿಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಿದ್ದೇವೆ” ಎಂದು ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ತಿಳಿಸಿದ್ದಾರೆ.

‘ನಮಗೆ ಈವರೆಗೆ ಅಂತಹ ಯಾವುದೇ ಮಾಹಿತಿ ಇಲ್ಲ’ ಎಂದ ಜೆಡಿಯು ಮುಖಂಡ!

ಕೆ ಸಿ ತ್ಯಾಗಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಇನ್ನೋರ್ವ ಜೆಡಿಯು ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಝಾ, “ನಿತೀಶ್ ಕುಮಾರ್‌ ಅವರಿಗೆ ಇಂಡಿಯಾ ಒಕ್ಕೂಟದಿಂದ ಪ್ರಧಾನಿ ಆಫರ್ ಬಂದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ” ಎಂದು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿರುವ ಅವರು, “ನಮ್ಮ ಮುಖ್ಯಮಂತ್ರಿಯವರಿಗೋ ಅಥವಾ ನಮ್ಮ ಪಕ್ಷಕ್ಕೋ ಈ ಬಗ್ಗೆ ತಿಳಿದಿಲ್ಲ. ನಿನ್ನೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ, ನಿತೀಶ್ ಕುಮಾರ್ ಅವರು ನಾವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೆವು. ಅದನ್ನು ಮುಂದುವರಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಎನ್‌ಡಿಎ ಒಕ್ಕೂಟದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತೇವೆ ಎಂದು ನಿತೀಶ್ ಅವರೇ ಹೇಳಿದ್ದಾರೆ. ನಿತೀಶ್ ಕುಮಾರ್‌ ಅವರಿಗೆ ಪ್ರಧಾನಿ ಹುದ್ದೆಯ ಆಫರ್ ಬಂದಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ” ಎಂದು ಹೇಳುವ ಮೂಲಕ ಜೆಡಿಯು ಮುಖಂಡ ಕೆ ಸಿ ತ್ಯಾಗಿ ನೀಡಿದ್ದ ಹೇಳಿಕೆಗೆ ಸಂಜಯ್ ಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X