ಕಾರ್ ಇಲ್ಲ, ಕಚೇರಿ ಇಲ್ಲ, ಕೆಲಸ ಮಾಡಬೇಕು: ನೂತನ ಕಾರ್ಯಾಧ್ಯಕ್ಷರಿಗೆ ಡಿಕೆಶಿ ಸೂಚನೆ

Date:

Advertisements

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನವಾಗಿ ಆಯ್ಕೆಗೊಂಡ ಐವರು ಕಾರ್ಯಾಧ್ಯಕ್ಷರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂರಿಂದ ಕಾಂಗ್ರೆಸ್ ಬಾವುಟ ಪಡೆಯುವ ಮೂಲಕ ತನ್ವೀರ್ ಸೇಠ್, ವಿನಯ್ ಕುಲಕರ್ಣಿ, ಜಿ ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌, “ನಿಮಗೆ ಸುತ್ತಾಡಲು ಕಾರು ಕೊಡುವುದಿಲ್ಲ. ಕಚೇರಿಯಲ್ಲಿ ರೂಮ್‌ ಕೊಡಲ್ಲ. ಆದರೆ, ಕೆಲಸ ಮಾಡಬೇಕು” ಎಂದು ತಾಕೀತು ಮಾಡಿದರು.

Advertisements

“ನಿಮ್ಮದೆ ಕಾರು ಬಳಸಿಕೊಂಡು ರಾಜ್ಯಾದ್ಯಂತ ಸುತ್ತಾಡಬೇಕು. ಹಿಂದಿನ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಆರ್‌ ಧ್ರುವನಾರಾಯಣ್ ಅವರನ್ನು ನೆನಸಿಕೊಳ್ಳಬೇಕು. ಅವರದ್ದೇ ಆದ ರೀತಿಯಲ್ಲಿ ಪಕ್ಷಕ್ಕೆ ಕೊಡುಗೆ ಕೊಟ್ಟಿದ್ದಾರೆ” ಎಂದು ನೆನಪಿಸಿದರು.

“ಎಂ ಬಿ ಪಾಟೀಲ್ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಾನು ಸಹ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಎನ್‌ಎಸ್‌ಯುಐಯಿಂದ ಬಂದವರು ನಾವು. ನನಗೆ ಎನ್‌ಎಸ್‌ಯುಐನಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಾರು ಅಂತ ಈಗ ಹೇಳುವುದು ಬೇಡ. ನಾವು ಹಾಗೂ ಹೀಗೂ ಮಾಡಿ ಬೆಳೆದಿದ್ದೇವೆ” ಎಂದರು.

“ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡಿದರೆ ಆಗಲ್ಲ. ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ಕೆಲಸ ‌ಮಾಡಿಲ್ಲ ಎಂದರೆ ಚುನಾವಣೆ ನಂತರ ನೀವು ಮಾಜಿಗಳು ಆಗುತ್ತೀರಿ. ನಾನು ಎಷ್ಟು ದಿನ ಇರುತ್ತೇನೊ ಬಿಡುತ್ತೇನೋ ಗೊತ್ತಿಲ್ಲ. ನೀವು ಕೆಲಸ ‌ಮಾಡಬೇಕು” ಎಂದು ಸೂಚಿಸಿದರು.

“ಆರು ಬಾರಿ ಶಾಸಕರಾಗಿರುವ ತನ್ವೀರ್ ಸೇಠ್ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವುದು ಹೆಮ್ಮೆಯ ವಿಚಾರ. ಜಿ.ಸಿ ಚಂದ್ರಶೇಖರ್ ಅವರು ವಿದ್ಯಾರ್ಥಿ ನಾಯಕತ್ವದಿಂದ ರಾಜ್ಯಸಭೆಗೆ ಪ್ರವೇಶ ಮಾಡಿದ್ದು, ವಿನಯ್ ಕುಲಕರ್ಣಿ ಅವರು ಯುವ ನಾಯಕತ್ವದಿಂದ ಸಚಿವರಾಗಿದ್ದು, ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿ ನಾಯಕರಾಗಿ ಶಾಸಕರಾಗಿದ್ದು, ಇವರ ಜತೆಗೆ ವಸಂತ ಕುಮಾರ್ ಅವರು ಕೂಡ ಯುವ ನಾಯಕತ್ವದಿಂದ ಬೆಳೆದು ಬಂದಿದ್ದು, ಇವರುಗಳು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಪ್ರಚಾರಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ಅವರು ಆಯ್ಕೆಯಾಗಿದ್ದು, ಇವು ಪವಿತ್ರ ಕೆಲಸವಾಗಿದ್ದು, ನಿಮ್ಮ ಅವಧಿಯಲ್ಲಿ ನೀವು ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X