ಎಕ್ಸಿಟ್ ಪೋಲ್‌ ಬಗ್ಗೆ ವಿಶ್ವಾಸವಿಲ್ಲ, ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ದಾಟುತ್ತೆ: ಡಿ ಕೆ ಶಿವಕುಮಾರ್‌

Date:

Advertisements

ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಸದ್ಯ ಸಮೀಕ್ಷೆಗಳು ಹೊರ ಬರುತ್ತಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ನಮಗೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲ” ಎಂದಿದ್ದಾರೆ.

ಮಾಧ್ಯಮಗಳು ಸಂಪರ್ಕಿಸಿದಾಗ ಮಾಹಿತಿ ನೀಡಿದ ಅವರು, “ನಾನು ಮೊದಲೇ ಹೇಳೀದ್ದೇನೆ. ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ಹೋಗುತ್ತದೆ” ಎಂದು ಹೇಳಿದ್ದಾರೆ.

“ಈ ಎಕ್ಸಿಟ್ ಪೋಲ್ ಬಗ್ಗೆ ವಿಶ್ವಾಸ ಇಲ್ಲ. ಬಹಳ ಡೆಪ್ತ್ ಆಗಿ ಹೋಗೋದಿಲ್ಲ. ಸ್ಯಾಂಪಲ್ ಅಷ್ಟೆ ಕಲೆಕ್ಟ್ ಮಾಡಿರುತ್ತಾರೆ. ಹೀಗಾಗಿ, ನಾನು ಹೆಚ್ಚು ಮಾತನಾಡುವುದಿಲ್ಲ” ಎಂದು ತಿಳಿಸಿದ್ದಾರೆ.

Advertisements

18ನೇ ಲೋಕಸಭೆಗೆ ನಡೆಯುತ್ತಿರುವ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಕೊನೆಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ನಡೆಸಿದ ವಿವಿಧ ಸಂಸ್ಥೆಗಳ ವರದಿಗಳು ಬಹಿರಂಗಗೊಂಡಿವೆ. ಟಿವಿ9 ಪೋಲ್‌ಸ್ಟ್ರಾಟ್‌ ಪೀಪಲ್ಸ್ ಇನ್‌ಸೈಟ್‌ನ ಚುನಾವಣೋತ್ತರ ಸಮೀಕ್ಷೆಯು ಬಿಜೆಪಿ 18 ಸ್ಥಾನಗಳನ್ನು ಗಳಿಸಲಿದೆ ಎಂದಿದೆ.

ನ್ಯೂಸ್ 18 ನಡೆಸಿದ ಎಕ್ಸಿಟ್‌ ಪೋಲ್‌ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 21ರಿಂದ 24 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 3ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ. ಇತರೆ ಯಾವ ಪಕ್ಷಗಳೂ ರಾಜ್ಯದಲ್ಲಿ ಗೆಲ್ಲುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಬಿಜೆಪಿ ಮೈತ್ರಿಕೂಟ 23ರಿಂದ 25 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ 3ರಿಂದ 5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದಿದೆ.

ಇಂಡಿಯಾ ಟಿ.ವಿ.: ಬಿಜೆಪಿ– 18ರಿಂದ 22; ಜೆಡಿಎಸ್– 1ರಿಂದ 3; ಕಾಂಗ್ರೆಸ್– 4ರಿಂದ 8

ಇಂಡಿಯಾ ಟುಡೇ: ಬಿಜೆಪಿ– 20ರಿಂದ 22; ಜೆಡಿಎಸ್– 2ರಿಂದ 3; ಕಾಂಗ್ರೆಸ್– 3ರಿಂದ 5

ಪೋಲ್ ಹಬ್‌: ಬಿಜೆಪಿ– 21ರಿಂದ 24; ಜೆಡಿಎಸ್– 1ರಿಂದ 2; ಕಾಂಗ್ರೆಸ್– 3ರಿಂದ 7

ಸಿ– ವೋಟರ್ಸ್‌: ಬಿಜೆಪಿ– 23; ಜೆಡಿಎಸ್– 2; ಕಾಂಗ್ರೆಸ್– 3ರಿಂದ 5

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X