ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

Date:

Advertisements

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ದೇವೇಗೌಡರು ಹಾಸನದಲ್ಲಿ ಮಾತನಾಡಿ ಮೈತ್ರಿಯಲ್ಲಿ ಇನ್ನೂ ಪೂರ್ಣ ಒಮ್ಮತ ಮೂಡದಿರುವ ಬಗ್ಗೆ ಸುಳಿವು ನೀಡಿದ್ದಾರೆ.

“ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಹೀಗೆಂದ ಮಾತ್ರಕ್ಕೆ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ. ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

“ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಅವರ ಮಾತು ಕೇಳಿದರೆ ರಾಹುಲ್ ಗಾಂಧಿ ಪಾಪ ಅನ್ನಿಸುತ್ತದೆ” ಎಂದು ದೇವೇಗೌಡರು ಲೇವಡಿ ಮಾಡಿದರು.

“ಪ್ರಧಾನಿ ಮೋದಿ ಅವರ ಜೊತೆ ಎರಡು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಎರಡನೆ ಹಂತದ ಚುನಾವಣೆ ಭಾಗದಲ್ಲೂ ಪ್ರಚಾರ ನಡೆಸುತ್ತೇನೆ. ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ” ಎಂದರು.

“ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಎಲ್ಲಿ ನೋಡಿದರೂ ಜನ ಸಾಗರ. ಅಲ್ಲಿ ನಾನು ನಿನ್ನೆ ಏಳು ಸಭೆ ಮಾಡಿದ್ದೇನೆ. ಆ ಜನ ಸಾಗರದ ನಡುವೆ ಒಂದೊಂದು ಸಭೆ ಮೂರು ಗಂಟೆ ತಡವಾಗಿದೆ. ಕಾಂಗ್ರೆಸ್ ದುಡ್ಡಿನ ಹೊಳೆ ಹರಿಸಿದರೂ ಗೆಲ್ಲುವುದು ನಾವೇ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X