ಬಸವಣ್ಣನ ಜನ್ಮಭೂಮಿ ಬಗ್ಗೆ ಯಾವ ಸರ್ಕಾರಕ್ಕೂ ಸ್ವಾಭಿಮಾನ ಇಲ್ಲ: ಸಚಿವ ಶಿವಾನಂದ ಪಾಟೀಲ

Date:

Advertisements
  • ‘ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ’
  • ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್‌: ಟೀಕೆ

ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಸರ್ಕಾರ ಆದರೂ ಬರಲಿ ಅಥವಾ ಬೇರೆ ಸರ್ಕಾರ ಆದರೂ ಬರಲಿ; ಯಾರೂ ಬಸವಣ್ಣನ ಜನ್ಮಭೂಮಿ ಬಗ್ಗೆ ಈವರೆಗೂ ಸ್ವಾಭಿಮಾನ ಪ್ರದರ್ಶಿಸಿಲ್ಲ ಎಂದು ಸಚಿವ ಶಿವಾನಂದ ಪಾಟೀಲ ಬೇಸರ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಸವಣ್ಣನ ಜನ್ಮಭೂಮಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಯಾವ ಸರ್ಕಾರವೂ ಗಂಭೀರವಾಗಿ ಯೋಚನೆ ಮಾಡಿಲ್ಲ. ಬರಿ ಶಾಸಕರೇ ಗುದ್ದಾಡಿ ಅನುದಾನ ತಂದು ಅಭಿವೃದ್ಧಿ ಮಾಡಲು ಆಗುವುದಿಲ್ಲ” ಎಂದರು.

“ಬರೀ ಹೆಸರು ಬದಲಾವಣೆಯಿಂದ ಬಸವಣ್ಣವರ ಹಿರಿಮೆ ಗರಿಮೆಯನ್ನು ನಾವು ಜಗತ್ತಿಗೆ ತಿಳಿಸುತ್ತೇವೆ ಎಂಬುದು ಕಷ್ಟ. ಬಸವಣ್ಣನ ಕುರುಹು ಸಮಾಜಕ್ಕೆ ತಿಳಿಯಬೇಕು ಎಂದರೆ ಕೂಡಲಸಂಗಮ ಮತ್ತು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಪಡಿಸಲಿ. ಆಗ ಮುಖ್ಯಮಂತ್ರಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

“ನಾನು ಬಸವಣ್ಣನ ಅಭಿಮಾನಿ ಎಂದುಕೊಂಡು ಬಸವಣ್ಣನ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು. ನಮಗೆ ಅಭಿಮಾನ ಇದೆ, ಮಾಡಿದ್ದೇವೆ. ಅಧಿಕಾರ ಮತ್ತು ಅವಕಾಶ ಇದ್ದವರು ಯಾರೇ ಮುಖ್ಯಮಂತ್ರಿ ಆಗಲಿ ಬಸವಣ್ಣನ ಜನ್ಮಭೂಮಿ ಬಗ್ಗೆ ಕಾಳಜಿ ವಹಿಸಲಿ. ಜಗತ್ತಿಗೆ ತೋರಿಸುವ ಒಂದು ಕೆಲಸ ಅವರ ಜನ್ಮಭೂಮಿಯಲ್ಲಿ ಅದು ನಮ್ಮ ಸರ್ಕಾರದಿಂದ ಆಗಲಿ ಅಥವಾ ಬೇರೆ ಸರ್ಕಾರದಿಂದ ಆಗಲಿ. ಒಟ್ಟಾರೆ ಆದರೆ ಒಳ್ಳೆಯದು” ಎಂದು ಅಭಿಪ್ರಾಯಪಟ್ಟರು.

ವಿಜಯಪುರ ಹೆಸಲು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, “ಹೆಸರು ಬದಲಾವಣೆ ವಿಚಾರವನ್ನು ನಾನು ಒಪ್ಪುವುದಿಲ್ಲ. ಕರ್ನಾಟಕಕ್ಕೆ ಬಸವ ನಾಡು ಎಂದು ಹೆಸರು ಬದಲಾವಣೆ ರಾಜಕೀಯ ಆಭಾಸ ಎನ್ನಿಸುತ್ತಿದೆ. ರಾಜಕೀಯ ಇಟ್ಟುಕೊಂಡು ಮಾಡಬಾರದು” ಎಂದು ಪರೋಕ್ಷವಾಗಿ ಎಂ ಬಿ ಪಾಟೀಲ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X