ಲೋಕಸಭಾ ಚುನಾವಣೆ | ಅಮಿತ್ ಶಾ ವಿರುದ್ಧ ಸ್ಪರ್ಧೆಗೆ ಹಿಂಜರಿಕೆಯಿಲ್ಲ: ಕಾಂಗ್ರೆಸ್‌ ಅಭ್ಯರ್ಥಿ ಸೋನಾಲ್ ಪಟೇಲ್

Date:

Advertisements

ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ ಸೋನಾಲ್ ಪಟೇಲ್ ಕಣಕ್ಕಿಳಿದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕನ ವಿರುದ್ಧ ಹೋರಾಡಲು ಯಾವುದೇ ಹಿಂಜರಿಕೆಯಿಲ್ಲ ಎಂದು ಅವರು ಹೇಳಿದ್ದಾರೆ.

ಎಐಸಿಸಿ ಕಾರ್ಯದರ್ಶಿಯಾಗಿರುವ 62 ವರ್ಷದ ಸೋನಾಲ್ ಅವರು ಗಾಂಧಿನಗರದಲ್ಲಿ ತಮ್ಮ ಪ್ರಚಾರ ಆರಂಭಿಸಿದ್ದಾರೆ. “ಬಿಜೆಪಿ ತಾನು ನೀಡಿದ್ದ ಭರವಸೆಗಳನ್ನು ಮತ್ತು ಜನರ ಆಕ್ಷಾಂಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಆಡಳಿತ ವಿರೋಧಿ ಅಲೆಯಿದೆ” ಎಂದು ಹೇಳಿದ್ದಾರೆ.

“ನಾನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದೆ. ನಾನು ಪಕ್ಷದಲ್ಲಿ ಟಿಕೆಟ್‌ಗೆ ಬೇಡಿಕೆ ಇಟ್ಟಿರಲಿಲ್ಲ. ಪಕ್ಷವು ನನ್ನ ಆಯ್ಕೆ ಮಾಡಿ, ಗಾಂಧಿನಗರದಲ್ಲಿ ಕಣಕ್ಕಿಳಿಸಿದೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ” ಎಂದು ಅವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

Advertisements

“ನಮ್ಮ ಕಾರ್ಯಕರ್ತರನ್ನು ಬೆದರಿಸಲಾಗುತ್ತಿದೆ. ಚುನಾವಣೆ ಮುಗಿದ ನಂತರ ಟಾರ್ಗೆಟ್‌ ಮಾಡುತ್ತಾರೆಂಬ ಭಯದಿಂದ ಹಲವರು ನಮ್ಮ ಸಭೆಗಳಿಗೆ ಬಾಡಿಗೆಗೆ ಜಾಗ ನೀಡುತ್ತಿಲ್ಲ. ಕೆಲವು ಕ್ಷುಲ್ಲಕ ಪ್ರಕರಣಗಳಲ್ಲಿ ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಠಾಣೆಗೆ ಕರೆಸುತ್ತಿದ್ದಾರೆ. ಆಡಳಿತ ಯಂತ್ರವನ್ನು ಬಳಸಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ” ಎಂದು ಆರೋಪಿಸಿದರು.

“ಬಿಜೆಪಿಯ ಸ್ಥಳೀಯ ನಾಯಕರು ನಡೆಸುತ್ತಿರುವ ಈ ಕುತಂತ್ರಗಳ ಬಗ್ಗೆ ಅಮಿತ್ ಶಾ ಅವರಿಗೆ ತಿಳಿದಿದೆಯೇ ಎಂಬುದು ಗೊತ್ತಿಲ್ಲ. ಆದರೆ, ಬಿಜೆಪಿ ನಡೆದುಕೊಳ್ಳುತ್ತಿರುವುದು ಆ ಪಕ್ಷ ಭಯಗೊಂಡಿದೆ ಎಂಬುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

“ಅಮಿತ್ ಶಾ ದೇಶದ ಗೃಹ ಸಚಿವರಾಗಿರಬಹುದು. ಆದರೆ, ಅವರು ಸಾಮಾನ್ಯ ಬಿಜೆಪಿ ಕಾರ್ಯಕರ್ತರಾಗಿದ್ದ ದಿನಗಳಿಂದ ನಾವು ಅವರನ್ನು ನೋಡಿದ್ದೇವೆ. ನನ್ನ ತಂದೆ ನಾರಣಪುರದಿಂದ ಕಾಂಗ್ರೆಸ್ ಪುರಸಭೆ ಸದಸ್ಯರಾಗಿದ್ದರು. ನಾರಣಪುರದಲ್ಲಿ ಅಮಿತ್ ಶಾ ಬೆಳೆದದ್ದನ್ನು ನಾವು ನೋಡಿದ್ದೇವೆ. ನಾನು ಕೂಡ ಅವರಂತೆ ತಳಮಟ್ಟದಿಂದ ಕೆಲಸ ಮಾಡಿದ್ದೇನೆ” ಎಂದು ವಿವರಿಸಿದರು.

“ಜನರು ಮತ ಚಲಾಯಿಸುವಾಗ ಅವರು ಗೃಹ ಮಂತ್ರಿ ಅಥವಾ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತೆ ಎಂಬುದನ್ನು ನೋಡಿ, ಆಯ್ಕೆ ಮಾಡುವುದಿಲ್ಲ. ಜನರು ಅಭ್ಯರ್ಥಿಗಳಾ ನೋಡುತ್ತಾರೆ. ಅವರ ವಿರುದ್ಧ ಸ್ಪರ್ಧೆಗೆ ನನಗೆ ಯಾವ ಹಿಂಜರಿಕೆಯೂ ಇಲ್ಲ” ಎಂದು ಹೇಳಿದರು.

“ಅವರು ಅಭಿವೃದ್ಧಿ ಮಾಡಿದ್ದೇವೆಂದು ಹೇಳಿಕೊಳ್ಳುತ್ತಾರೆ. ಆದರೆ, ಬಡವರು ಇನ್ನೂ ಬಡವರಾಗುತ್ತಿದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಹಳ್ಳಿಗಳಲ್ಲಿ ಉದ್ಯೋಗಾವಕಾಶಗಳಿಲ್ಲ. ರೈತರ ಹಿಡುವಳಿಯೂ ಕಡಿಮೆಯಾಗುತ್ತಿದೆ. ಹಳ್ಳಿಗನೊಬ್ಬ ನಗರಕ್ಕೆ ಹೋದಾಗ, ಅವರು ತೀವ್ರ ಹಣದುಬ್ಬರವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಬಿಜೆಪಿ ಬಳಿ ಉತ್ತರವಿಲ್ಲ” ಎಂದು ಆರೋಪಿಸಿದರು.

ಗುಜರಾತ್‌ನಲ್ಲಿ 26 ಲೋಕಸಭಾ ಕ್ಷೇತ್ರಗಳಿದ್ದು, ಮೇ 7 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X