ಬಸ್‌ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

Advertisements
  • ಪ್ರಯಾಣ ದರ ಹೆಚ್ಚಳ ಕುರಿತು ಆಯೋಗ ರಚಿಸಲು ವರದಿ
  • ನಿತ್ಯ ಸರ್ಕಾರಿ ಬಸ್‌ಗಳಲ್ಲಿ 1.20 ಕೋಟಿ ಜನರು ಪ್ರಯಾಣ

ರಾಜ್ಯದಲ್ಲಿ ಸಾರಿಗೆ ಪ್ರಯಾಣ ದರ ಹೆಚ್ಚಳ ಕುರಿತಂತೆ ಆಯೋಗ ರಚನೆಗಾಗಿ ಮಾಜಿ ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ಮೂರ್ತಿ ಅವರು ನಾಲ್ಕು ನಿಗಮಗಳಿಗೆ ಸೇರಿದಂತೆ 150 ಪುಟಗಳ ವರದಿ ನೀಡಿದ್ದಾರೆ. ಆದರೆ, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಮಂದೂಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಸಂತೆ ಮೈದಾನದ ಹಿಂಭಾಗದಲ್ಲಿರುವ ಬಿಎಂಟಿಸಿ ಬಸ್‌ ಡಿಪೊಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ಪ್ರತಿನಿತ್ಯ ಸರ್ಕಾರಿ ಬಸ್‌ಗಳನ್ನು 1.20 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ. ಆಯೋಗ ರಚನೆ ಮಾಡಿದರೆ ಪ್ರಯಾಣ ದರ ಹೆಚ್ಚು ಮಾಡಬೇಕಾಗುತ್ತದೆ” ಎಂದರು.

“ಪ್ರತಿ ವರ್ಷ ಕೃಷಿ, ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಸರ್ಕಾರ ಖರ್ಚು ಮಾಡುತ್ತದೆ. ಅದೇ ರೀತಿ ಸಾರಿಗೆಗೂ ವ್ಯಯ ಮಾಡುತ್ತೇವೆ. ಪ್ರಯಾಣ ದರವನ್ನು ಹೆಚ್ಚಳ ಮಾಡುವುದರಿಂದ ಶ್ರೀಸಾಮಾನ್ಯರಿಗೆ ತೊಂದರೆಯಾಗುತ್ತದೆ. ರಾಜ್ಯ ಸಾರಿಗೆ ಸಂಸ್ಥೆಯೂ ಸೇವಾ ಮನೋಭಾವದಿಂದ ನಡೆಯುತ್ತಿದ್ದು, ಲಾಭದ ಉದ್ದೇಶವಿಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಗನಿಗೆ ಸಾರಾಯಿ ಕುಡಿಸಿದ ಹಾಗೆ ಯತ್ನಾಳ್‌ ಮಾತು: ಮುರುಗೇಶ್ ನಿರಾಣಿ ಕಿಡಿ

“ಬರ ಇರುವುದರಿಂದ ಈ ಬಾರಿ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿಲ್ಲ” ಎಂದು ತಿಳಿಸಿದರು.

“ಯಾವ ಮಾಹಿತಿ ಆಧಾರದಲ್ಲಿ ಶಾಮನೂರು ಶಿವಶಂಕರಪ್ಪ ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ್ದಾರೋ ಗೊತ್ತಿಲ್ಲ. ಈವರೆಗೂ ಜಾತಿ ಗಣತಿಯ ವರದಿ ರಾಜ್ಯ ಸರ್ಕಾರ ಮಂಡನೆ ಮಾಡಿಲ್ಲ. ವರದಿಯಲ್ಲಿ ಏನಿದೆ ಎಂಬುದು ನನಗೆ ತಿಳಿದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X