ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ: ಕೇಂದ್ರ ಸರ್ಕಾರ

Date:

Advertisements

ಕೇಂದ್ರ ಸರ್ಕಾರ ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ನಿರಂತರವಾಗಿ ದಕ್ಷಿಣ ಭಾರತದ ರಾಜ್ಯಗಳು ಆರೋಪಿಸುತ್ತಿದೆ. ತಮಿಳುನಾಡು ಸರ್ಕಾರವಂತೂ ಕೇಂದ್ರದ ವಿರುದ್ಧವಾಗಿ ಭಾಷಾ ಸಮರವನ್ನು ಘೋಷಿಸಿದೆ. ಈ ನಡುವೆ ಕೇಂದ್ರ ಸರ್ಕಾರವು “ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ” ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಈ ಬಗ್ಗೆ ಲಿಖಿತ ಪ್ರತಿಕ್ರಿಯೆ ನೀಡಿದ ಡಾ ಸುಕಾಂತ ಮಜುಮ್ದಾರ್, “ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಬರುವ ತ್ರಿಭಾಷಾ ಸೂತ್ರವನ್ನು ಸಾಂವಿಧಾನಿಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಜಾರಿಗೆ ತರಲಾಗುವುದು. ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

Advertisements

“ಮಕ್ಕಳು ಕಲಿಯಬೇಕಾದ ಮೂರು ಭಾಷೆಗಳು ರಾಜ್ಯದ, ಆ ಪ್ರದೇಶಕ್ಕೆ ತಕ್ಕುದಾದ ಆಯ್ಕೆಯಾಗಿರುತ್ತದೆ. ಖಂಡಿತವಾಗಿಯೂ ವಿದ್ಯಾರ್ಥಿಗಳೇ ಅದನ್ನು ಆಯ್ಕೆ ಮಾಡಬಹುದು. ಮೂರು ಭಾಷೆಯ ಪೈಕಿ ಎರಡು ಭಾಷೆಯಾದರೂ ಭಾರತದ್ದಾಗಿರುತ್ತದೆ” ಎಂದು ಸಿಪಿಐಎಂ ನಾಯಕ ಡಾ ಜಾನ್ ಬ್ರಿಟ್ಟಾಸ್ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರವು ವಿದ್ಯಾಭ್ಯಾಸ, ರಾಜಕೀಯ ಮೊದಲಾದ ಕಡೆಗಳಲ್ಲಿ ಮಾಡುತ್ತಿರುವ ಭಾಷಾ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಅದರಲ್ಲೂ ಮುಖ್ಯವಾಗಿ ತಮಿಳುನಾಡು ಖಂಡಿಸುತ್ತಾ ಬಂದಿದೆ. ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸಲಾಗುತ್ತಿದೆ. ಆದರೆ ಉತ್ತರ ಭಾರತದ ರಾಜ್ಯಗಳಲ್ಲಿ ಮಾತ್ರ ಈ ತ್ರಿಭಾಷಾ ಸೂತ್ರ ನಿಯಮ ಪ್ರಕಾರವಾಗಿ ಜಾರಿಯಾಗಿಲ್ಲ. ಉತ್ತರ ಭಾರತದಲ್ಲಿ ಬಹುತೇಕರು ಸಂಸ್ಕೃತವನ್ನೇ ಮೂರನೇ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಉತ್ತರ ಭಾರತದ ಹಿಂದಿಯನ್ನು ದಕ್ಷಿಣ ಭಾರತದಲ್ಲಿ ಕಲಿಸುವಂತೆ ದಕ್ಷಿಣ ಭಾರತದ ಭಾಷೆಗಳನ್ನು ಉತ್ತರ ಭಾರತದಲ್ಲಿ ಪಠ್ಯವನ್ನಾಗಿಸಿಲ್ಲ.

ತ್ರಿಭಾಷಾ ಸೂತ್ರವನ್ನು ನಿಯಮ ಪ್ರಕಾರವಾಗಿ ಜಾರಿಗೆ ತರದಿರುವುದೇ ಹಿಂದಿ ಹೇರಿಕೆಯ ಆರೋಪ ಹುಟ್ಟಲು ಕಾರಣವಾಗದೆ. ಹಾಗೆಯೇ ದಕ್ಷಿಣ ಭಾರತದ ಸಚಿವರುಗಳಿಗೆ, ಶಾಸಕರುಗಳಿಗೆ ಇಂಗ್ಲೀಷ್ ಬದಲಾಗಿ ಹಿಂದಿಯಲ್ಲಿ ಸುತ್ತೋಲೆ ಕಳುಹಿಸುವುದು ಭಾಷಾ ಹೇರಿಕೆಯನ್ನು ಸಾಬೀತುಪಡಿಸುತ್ತದೆ. ಒಂದು ದೇಶ, ಒಂದು ಚುನಾವಣೆ ಎಂಬಂತೆ ದೇಶದ ವೈವಿಧ್ಯತೆಯನ್ನು ಬದಿಗೊತ್ತಿ ಒಂದು ಭಾಷೆ, ಒಂದು ಧರ್ಮ, ಓರ್ವನೇ ನಾಯಕ ಎಂಬ ಸರ್ವಾಧಿಕಾರದತ್ತ ದೇಶವನ್ನು ಕೊಂಡೊಯ್ಯುವುದು ಬಿಜೆಪಿ ಸರ್ಕಾರದ ಹುನ್ನಾರ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X