ನ್ಯಾಯಾಲಯ ಏನೇ ತೀರ್ಪು ಕೊಡಲಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್ ನಿಲ್ಲಲಿದೆ: ಸಚಿವ ಪರಮೇಶ್ವರ್‌

Date:

Advertisements

ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಸಿಎಂ ಜೊತೆ ಇರುತ್ತೇವೆ. 29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ ಚರ್ಚೆ ಆಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ‌. ಸಿಎಂ ಅವರ ಸಹಿ, ಯಾವುದೇ ರೀತಿಯ ದಾಖಲೆಗಳಿಲ್ಲ. ರಿಜಿಸ್ಟ್ರೇಷನ್ ಅಲ್ಲಿಯೂ ಸಹ ಅವರ ಹೆಸರು ಉಲ್ಲೇಖವಾಗಿಲ್ಲ. ಇದೆಲ್ಲವನ್ನು ನ್ಯಾಯಾಲಯ ಗಮನಿಸಿಯೇ ತೀರ್ಮಾನ ಕೊಡುತ್ತದೆ ಎಂದು ನಿರೀಕ್ಷೆ ಮಾಡಿದ್ದೇವೆ” ಎಂದರು.

ಮೈತ್ರಿ ಪಕ್ಷಗಳ ಪ್ರಾಸಿಕ್ಯೂಷನ್ ಗೆ ಒತ್ತಾಯಿಸಿ ರಾಜಭವನ ಚಲೋ ವಿಚಾರದ ಕುರಿತು ಮಾತನಾಡಿ, “ರಾಜ್ಯಪಾಲರ ನಡೆಯ ಬಗ್ಗೆ ಒಂದಷ್ಟು ಚರ್ಚೆ ಮಾಡಿ ತೀರ್ಮಾನಗಳನ್ನು ಮಾಡಿದ್ದೇವೆ. ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿದ್ದಾರೆ. ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಮಾಡುತ್ತೇವೆ” ಎಂದು ಹೇಳಿದರು.

Advertisements

“ಇದರ ಜೊತೆಯಲ್ಲೇ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ. ಅಷ್ಟರೊಳಗೆ ಕೋರ್ಟ್‌ನಲ್ಲಿ ಏನೆಲ್ಲ ತೀರ್ಮಾನ ಆಗುತ್ತದೆ ಎಂಬುದನ್ನು ನೋಡಬೇಕಿದೆ. ಆನಂತರ ರಾಷ್ಟ್ರಪತಿಯವರನ್ನು ಭೇಟಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆ.31ರಂದು ರಾಜಭವನ ಚಲೋ ಮಾಡುತ್ತೇವೆ” ಎಂದು ತಿಳಿಸಿದರು.

ಪ್ರಭಾವ ಬಳಸಿಲ್ಲ

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ನೀಡಿದ ವಿಚಾರದ ಪ್ರತಿಕ್ರಿಯಿಸಿ, “ಕೆಐಎಡಿಬಿ ನಿವೇಶನ ಅಕ್ರಮವಾಗಿ ಪಡೆದಿದ್ದಾರ ಇಲ್ಲವೇ ಎಂಬುದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ. ಅವರು ಕಾನೂನು ಬಾಹಿರವಾಗಿ ಪಡೆದಿದ್ದಾರೆ ಎಂಬುದಾದರೆ ರಾಜ್ಯಪಾಲರು ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳಲಿ.‌ ಖರ್ಗೆ ಅವರು ತಮ್ಮ ಪ್ರಭಾವ ಬಳಸಿ, ಟ್ರಸ್ಟ್‌ಗೆ ನಿವೇಶನ ಪಡೆದಿಲ್ಲ” ಎಂದರು‌.

“ಬಿಜೆಪಿ ಆಡಳಿತ‌ ನಡೆಸುತ್ತಿರುವ ಸರ್ಕಾರಗಳು, ಕೇಂದ್ರ ಸರ್ಕಾರದ ಮೇಲೆಯೂ ಭ್ರಷ್ಟಚಾರದ ಆರೋಪಗಳಿಲ್ಲವೇ? ನಮ್ಮ ಸರ್ಕಾರದ ಮೇಲೆ ನಿರಾದಾರ ಆರೋಪ ಬಂದಿದೆ. ಆರೋಪಗಳನ್ನು ನಿರಾದಾರ ಎಂಬುದನ್ನು ನಾವು ಸಾಬೀತುಪಡಿಸುತ್ತೇವೆ” ಎಂದು ಹೇಳಿದರು.

“ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ. ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರು ನನ್ನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದ್ದು ನಿಜ. ನೀವೆಲ್ಲ ನೋಡಿದ್ದೀರಿ. ಪಕ್ಷ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪಕ್ಷದ ವಿಚಾರದಲ್ಲಿ ಅವರು ನನಗೆ ಏನು ಹೇಳಬೇಕು, ಹೇಳಿದ್ದಾರೆ. ಅದನ್ನು ಬಿಟ್ಟು ಬೇರೆ ಏನು ಮಾತನಾಡಿಲ್ಲ. ನಾನು ಪಕ್ಷದಲ್ಲಿ ಹಿರಿಯ ಇರಬಹುದು. ಆ ಪ್ರಶ್ನೆ ಮೂಡಿಲ್ಲ. ಅದರ ಬಗ್ಗೆ ನಾನು ಉತ್ತರವನ್ನು ನೀಡುವುದಿಲ್ಲ‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X