ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ಧ ಹೋರಾಟ ನಿರಂತರ: ಡಿ ಕೆಂಪಣ್ಣ

Date:

Advertisements
  • ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆ ಚರ್ಚೆ
  • ‘ಬಾಕಿ ಇರುವ ಬಿಲ್ ಪಾವತಿ ಕುರಿತು ಮುಖ್ಯಮಂತ್ರಿಗಳಿಗೆ ಮನವಿ

ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ದದ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೇಳಿದರು.

ಇಂದು (ಶುಕ್ರವಾರ) ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾದ್ಯಮಗಳೊಂದಿಗೆ ಅವರು ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕಮಿಷನ್ ದಂಧೆ ವಿರುದ್ಧ ಹೋರಾಟ ನಡೆಸಿದ್ದೆವು. ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆ ನಡೆದರೂ ಬಹಿರಂಗಪಡಿಸುತ್ತೇವೆ ಎಂದವರು ಹೇಳಿದರು.

ಬಾಕಿ ಇರುವ ಬಿಲ್ ಪಾವತಿ ಕುರಿತು ಮನವಿ ಮಾಡಲು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೆವು. ಹಿಂದಿನ ಸರ್ಕಾರದ ಅವಧಿಯ ಕಮಿಷನ್ ದಂಧೆ ಕುರಿತು ಏನು ಹೇಳಬೇಕಿತ್ತೋ ಅದನ್ನು ಹೇಳಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ?:ನಮ್ಮ ಅವಧಿಯಲ್ಲೇ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ : ಸಿಎಂ ಸಿದ್ದರಾಮಯ್ಯ

‘ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ನಿಗದಿಯಾಗಿದೆ’ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ‘ಈ ಸರ್ಕಾರದಲ್ಲಿ ಈವರೆಗೆ ಯಾರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ಯಾರಾದರೂ ಸಚಿವರು ಅಥವಾ ಅಧಿಕಾರಿಗಳು ಕಮಿಷನ್ ಗೆ ಬೇಡಿಕೆ ಇಟ್ಟರೆ ಅದನ್ನು ಮುಲಾಜಿಲ್ಲದೆ ಬಹಿರಂಗಪಡಿಸುತ್ತೇವೆ’ ಎಂದು ಉತ್ತರಿಸಿದರು.

ಹಿಂದಿನ ಸರ್ಕಾರದ ವಿರುದ್ಧದ ಆರೋಪಕ್ಕೆ ದಾಖಲೆ ಒದಗಿಸಿಲ್ಲ ಎಂಬ ಟೀಕೆ ಬಗ್ಗೆ ಕೇಳಿದಾಗ, ‘ಆ ವಿಚಾರ ಈಗ ನ್ಯಾಯಾಲಯದಲ್ಲಿದೆ. ಸೂಕ್ತ ಸಂದರ್ಭದಲ್ಲಿ ಆ ಮಾಹಿತಿ ಬಹಿರಂಗಪಡಿಸುತ್ತೇವೆ’ ಎಂದು ಕೆಂಪಣ್ಣ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

Download Eedina App Android / iOS

X