ಕಾವೇರಿಗಾಗಿ ಬಂದ್‌ ಮಾಡುವ ಅಗತ್ಯವಿಲ್ಲ, ಅಹಿತಕರ ಘಟನೆಗಳಾದರೆ ಕ್ರಮ: ಗೃಹಸಚಿವ ಪರಮೇಶ್ವರ್

Date:

Advertisements
  • ‘ಕರ್ನಾಟಕ ಬಂದ್‌ ಮಾಡದಂತೆ ಸಂಘಟನೆಗಳಿಗೆ ಮನವಿ’
  • ‘ಬಂದ್‌ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು’

ಕಾವೇರಿ ವಿಚಾರದಲ್ಲಿ ಬಂದ್‌ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡಾ‌ ಬಂದ್ ಮಾಡಬಾರದು ಎಂದಿದೆ. ಪ್ರತಿಭಟನೆ ಮಾಡಬಹುದು, ಪ್ರತಿಭಟನೆ ಅವರ ಹಕ್ಕು ಎಂದು ಗೃಹಮಂತ್ರಿ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, “ಕರ್ನಾಟಕ ಬಂದ್‌ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಬಂದ್‌ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಇಂತಹ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೋಗಬಾರದು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದರೆ ಪೊಲೀಸರು ಸೂಕ್ತವಾದ ಕ್ರಮ ಕೈಗೊಳ್ಳುತ್ತಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

ಬಂದ್ ನಿಂದ 2000 ಕೋಟಿ ನಷ್ಟ

“ಮಂಗಳವಾರ ನಡೆದ ಒಂದು ದಿನದ ಬಂದ್ ನಿಂದಾಗಿ 2000 ಕೋಟಿ ನಷ್ಟವಾಗಿದೆ. ಇವತ್ತು ರಜೆ ಇದೆ. ನಾಳೆಯು ಬಂದ್ ಮಾಡಿದರೆ ಮತ್ತಷ್ಟು ಸಮಸ್ಯೆ ಆಗಲಿದೆ. ಸಂಘಟನೆಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡುತ್ತಿದ್ದಾರಾ ಅಥವಾ ಬೇರೆಯವರು ಅವರ ಮೇಲೆ ಒತ್ತಡ ಹೇರುತ್ತಿದ್ದಾರಾ ಗೊತ್ತಿಲ್ಲ” ಎಂದು ಪ್ರತಿಪಕ್ಷಗಳ ವಿರುದ್ಧ ಕುಟುಕಿದರು.

ಅನುಕೂಲ ಸಿಂಧು ರಾಜಕಾರಣ

“ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದ ನಂತರ ಸಾಕಷ್ಟು ಜನ ಕಾಂಗ್ರೆಸ್‌ ಕಡೆ ಮುಖ ಮಾಡುತ್ತಿದ್ದಾರೆ. ಈಗ ತತ್ವ ಸಿದ್ದಾಂತ ಎಂಬುದು ಇಲ್ಲ. ಎಲ್ಲ ಅನುಕೂಲ ಸಿಂಧು ರಾಜಕಾರಣ. ಬೇರೆ ಬೇರೆ ಕಡೆಗಳಿಂದ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಕೆಲವರು ಆಸಕ್ತಿ ತೋರಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತಿದ್ದೇವೆ” ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X